ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ
ದೆಹಲಿ ಸಂಪುಟ ಸಭೆಯಲ್ಲಿ ತೀರ್ಮಾನ; ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕ್ರಮ
Team Udayavani, Oct 27, 2021, 10:15 PM IST
ನವದೆಹಲಿ: ಈ ವರ್ಷದ ಆರಂಭದಲ್ಲಿ ದೆಹಲಿ ಸರ್ಕಾರ ಜಾರಿಗೊಳಿಸಿದ್ದ “ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನಾ’ ಕಾರ್ಯಕ್ರಮದಡಿ ಪಟ್ಟಿ ಮಾಡಲಾಗಿದ್ದ ಪುಣ್ಯಕ್ಷೇತ್ರಗಳಲ್ಲಿ ಅಯೋಧ್ಯೆಯನ್ನು ಹೊಸತಾಗಿ ಸೇರ್ಪಡೆಗೊಳಿಸಲಾಗಿದೆ.
ಈ ಕುರಿತ ಪ್ರಸ್ತಾವನೆಗೆ ಬುಧವಾರ ನಡೆದ ದೆಹಲಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಆ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ವಿಶ್ಲೇಷಣೆ ನಡೆದಿದೆ.
ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಯೋಧ್ಯೆಗೆ ತೆರಳಿ, ರಾಮಜನ್ಮಭೂಮಿಯಲ್ಲಿರುವ ರಾಮಲಲ್ಲಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.
ಇದನ್ನೂ ಓದಿ:ಸಹಕಾರ ಕ್ಷೇತ್ರದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ರಾಜಸ್ವ ಸಂಗ್ರಹ
ಈ ಯೋಜನೆಯಡಿ ಆಯ್ಕೆಯಾಗುವ ಪ್ರಯಾಣಿಕರು, ಸರ್ಕಾರದಿಂದ ಪಟ್ಟಿ ಮಾಡಲಾಗಿರುವ ಪುಣ್ಯಕ್ಷೇತ್ರಗಳಿಗೆ ಹೋಗಿ ಬರಲು ಬೇಕಾದ ಖರ್ಚುಗಳನ್ನು (ಸಾರಿಗೆ, ಎ.ಸಿ. ಹೋಟೆಲ್ಗಳಲ್ಲಿ ವಾಸ್ತವ್ಯ, ಆಹಾರ) ದೆಹಲಿ ಸರ್ಕಾರವೇ ವಹಿಸಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ನಾವು ಮತ್ತೆ ಆಡುತ್ತೇವೆ; ಬಂಗಾಳ ಭಾರತಕ್ಕೆ ದಾರಿ ತೋರಿಸಲಿದೆ: ಮಮತಾ ಬ್ಯಾನರ್ಜಿ
ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ
ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕನಿಗೆ ಬೈಕ್ ಢಿಕ್ಕಿ: ಬಾಲಕ ಮೃತ್ಯು
ವಿಶ್ವದ ಮೂಲೆ ಮೂಲೆಗೂ ಶೀಘ್ರವೇ ಬಾಹ್ಯಾಕಾಶ ಆಧರಿತ ಅಂತರ್ಜಾಲ ಸೇವೆ
MUST WATCH
ಹೊಸ ಸೇರ್ಪಡೆ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ