ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ
ದೆಹಲಿ ಸಂಪುಟ ಸಭೆಯಲ್ಲಿ ತೀರ್ಮಾನ; ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕ್ರಮ
Team Udayavani, Oct 27, 2021, 10:15 PM IST
ನವದೆಹಲಿ: ಈ ವರ್ಷದ ಆರಂಭದಲ್ಲಿ ದೆಹಲಿ ಸರ್ಕಾರ ಜಾರಿಗೊಳಿಸಿದ್ದ “ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನಾ’ ಕಾರ್ಯಕ್ರಮದಡಿ ಪಟ್ಟಿ ಮಾಡಲಾಗಿದ್ದ ಪುಣ್ಯಕ್ಷೇತ್ರಗಳಲ್ಲಿ ಅಯೋಧ್ಯೆಯನ್ನು ಹೊಸತಾಗಿ ಸೇರ್ಪಡೆಗೊಳಿಸಲಾಗಿದೆ.
ಈ ಕುರಿತ ಪ್ರಸ್ತಾವನೆಗೆ ಬುಧವಾರ ನಡೆದ ದೆಹಲಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಆ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ವಿಶ್ಲೇಷಣೆ ನಡೆದಿದೆ.
ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಯೋಧ್ಯೆಗೆ ತೆರಳಿ, ರಾಮಜನ್ಮಭೂಮಿಯಲ್ಲಿರುವ ರಾಮಲಲ್ಲಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.
ಇದನ್ನೂ ಓದಿ:ಸಹಕಾರ ಕ್ಷೇತ್ರದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ರಾಜಸ್ವ ಸಂಗ್ರಹ
ಈ ಯೋಜನೆಯಡಿ ಆಯ್ಕೆಯಾಗುವ ಪ್ರಯಾಣಿಕರು, ಸರ್ಕಾರದಿಂದ ಪಟ್ಟಿ ಮಾಡಲಾಗಿರುವ ಪುಣ್ಯಕ್ಷೇತ್ರಗಳಿಗೆ ಹೋಗಿ ಬರಲು ಬೇಕಾದ ಖರ್ಚುಗಳನ್ನು (ಸಾರಿಗೆ, ಎ.ಸಿ. ಹೋಟೆಲ್ಗಳಲ್ಲಿ ವಾಸ್ತವ್ಯ, ಆಹಾರ) ದೆಹಲಿ ಸರ್ಕಾರವೇ ವಹಿಸಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…