ದೆಹಲಿ ದಂಗೆ : ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕೇಜ್ರಿವಾಲ್
Team Udayavani, Feb 27, 2020, 5:56 PM IST
ನವದೆಹಲಿ: ಇಲ್ಲಿನ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಮತ್ತು ಘರ್ಷಣೆಯಲ್ಲಿ ಗಾಯಗೊಂಡವರಿಗೆ ಹಾಗೂ ದೊಂಬಿಯಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಪರಿಹಾರವನ್ನು ಘೋಷಿಸಿದ್ದಾರೆ.
ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ರಕ್ತಸಂಬಂಧಿಗಳಿಗೆ ತಲಾ 10 ಲಕ್ಷ ರೂಪಾಯಿಗಳ ನಗದು ಪರಿಹಾರವನ್ನು ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಅಪ್ರಾಪ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಲಾಗಿದೆ.
ಇನ್ನು ಹಿಂಸಾಚಾರ ಘಟನೆಗಳ ಸಂದರ್ಭದಲ್ಲಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಮನೆಗಳ ಮಾಲಿಕರಿಗೆ 5 ಲಕ್ಷ ರೂಪಾಯಿಗಳನ್ನು ಒದಗಿಸಲಾಗುವುದು ಎಂದು ಕೇಜ್ರವಾಲ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಮತ್ತು ಬಾಡಿಗೆ ಮನೆಗಳಲ್ಲಿದ್ದು ತಮ್ಮ ವಸ್ತುಗಳನ್ನು ಕಳೆದುಕೊಂಡ ಬಾಡಿಗೆದಾರರಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ದೊಂಬಿಯಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಕಳೆದುಕೊಂಡಂತವರಿಗೆ ಅವರು ಕಳೆದುಕೊಂಡಿರಬಹುದಾದ ಪ್ರತೀ ಪ್ರಾಣಿಗೆ ತಲಾ 5 ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಇನ್ನು ಆಟೋ ರಿಕ್ಷಾ ಕಳೆದುಕೊಂಡವರಿಗೆ 25 ಸಾವಿರ ಪರಿಹಾರ ಧನ ಲಭಿಸಿದರೆ, ಇ-ರಿಕ್ಷಾ ಕಳೆದುಕೊಂಡಂತವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಧನವನ್ನು ನೀಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನು ದಂಗೆ ಸಂದರ್ಭದ ಘರ್ಷಣೆಗಳಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲುಗೊಂಡಿರುವ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ದೆಹಲಿ ಸರಕಾರವೇ ಭರಿಸಲಿದೆ ಎಂದೂ ಸಹ ಮುಖ್ಯಮಂತ್ರಿಯವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ