ಕೊಡಲಿಯಿಂದ ಹೊಡೆದು 11ನೇ ತರಗತಿ ವಿದ್ಯಾರ್ಥಿನಿ ಹತ್ಯೆ: ಒಂದು ತಿಂಗಳ ಕಾಲ ಹಿಂಬಾಲಿಸಿದ್ದ!
ಈತ ಒಂದು ತಿಂಗಳಿನಿಂದ ಆಕೆಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Team Udayavani, Jul 14, 2021, 10:39 AM IST
ನವದೆಹಲಿ: 16 ವರ್ಷದ ಬಾಲಕಿಯನ್ನು ಕೊಡಲಿಯಿಂದ ಹೊಡೆದು ಯುವಕನೊಬ್ಬ ಹತ್ಯೆಗೈದಿದ್ದು, ಈತ ಕಳೆದ ಒಂದು ತಿಂಗಳಿನಿಂದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ನಿರಂತರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ಘಟನೆಗೆ ಸಂಬಂಧಿಸಿದಂತೆ ಮಂಗಳವಾರ (ಜುಲೈ 14) ಪೊಲೀಸರು ಯುವಕನನ್ನು(21ವರ್ಷ) ಬಂಧಿಸಿದ್ದಾರೆ. 11ನೇ ತರಗತಿ
ವಿದ್ಯಾರ್ಥಿನಿಯನ್ನು ಕೊಡಲಿಯಿಂದ ಕಡಿದು ಹತ್ಯೆಗೈದ ನಂತರ ಆರೋಪಿ ಪ್ರವೀಣ್ ಪರಾರಿಯಾಗಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪ್ರವೀಣ್ ನನ್ನು ಹರ್ಯಾಣದ ಪಾಲ್ವಾಲ್ ನಲ್ಲಿರುವ ಸಹೋದರಿಯ ಮನೆಯಲ್ಲಿ ಬಂಧಿಸಿರುವುದಾಗಿ ವರದಿ ಹೇಳಿದೆ. ದಕ್ಷಿಣ ಕ್ಯಾಂಪಸ್ ಪೊಲೀಸ್ ಠಾಣೆಯಿಂದ ಮಧ್ಯಾಹ್ನ 1.30ಕ್ಕೆ ಪಿಸಿಆರ್ ಕರೆಯೊಂದು ಬಂದಿದ್ದು, ಬಾಲಕಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದ್ದು, ಆಕೆಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಹಿತಿ ಬಂದಿತ್ತು.
ಆರೋಪಿಯನ್ನು ಶೀಘ್ರವೇ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಇಂಗಿತ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ದೆಹಲಿಯ ಮೋತಿ ಬಾಗ್ ಪ್ರದೇಶದ ಶಾಂತಿಟೌನ್ ನಿವಾಸಿ ಪ್ರವೀಣ್ ನಿರುದ್ಯೋಗಿಯಾಗಿದ್ದ, ಈತ ಒಂದು ತಿಂಗಳಿನಿಂದ ಆಕೆಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು