Sisodia ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್; ವಿಡಿಯೋ
ಶಿಕ್ಷಣ ಕ್ರಾಂತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ: ಬಿಜೆಪಿ ವಿರುದ್ಧ ಆಕ್ರೋಶ
Team Udayavani, Jun 7, 2023, 2:36 PM IST
ಹೊಸದಿಲ್ಲಿ : ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸ್ಥಿತಿಯನ್ನು ನೆನೆದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಣ್ಣೀರಿಟ್ಟ ಘಟನೆ ಬುಧವಾರ ನಡೆದಿದೆ.
ಶಿಕ್ಷಣ ಸಂಸ್ಥೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಿಸೋಡಿಯಾ ಅವರು ಮಾಡಿದ ಕಾರ್ಯಗಳನ್ನು ನೆನೆದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾವುಕರಾದರು.
”ಬಿಜೆಪಿಯವರು ಸುಳ್ಳು ಕೇಸು ಹಾಕಿ ಜೈಲಿಗೆ ಹಾಕಿದ್ದಾರೆ. ಮನೀಶ್ ಜೀ ಉತ್ತಮ ಶಾಲೆಗಳನ್ನು ಕಟ್ಟದಿದ್ದರೆ ಅವರನ್ನು ಜೈಲಿಗೆ ಹಾಕುತ್ತಿರಲಿಲ್ಲ.ಅವರು ಶಿಕ್ಷಣ ಕ್ರಾಂತಿಯನ್ನು ಕೊನೆಗೊಳಿಸಲು ಬಯಸುತ್ತಾರೆ ಆದರೆ ನಾವು ಶಿಕ್ಷಣ ಕ್ರಾಂತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ.” ಎಂದರು.
#WATCH | Delhi CM Arvind Kejriwal gets emotional, as he remembers former education minister Manish Sisodia and his work in the area of education, at the inauguration of an educational institution pic.twitter.com/BDGSSbmpbq
— ANI (@ANI) June 7, 2023
”ನಾನು ಐಐಟಿ ಖರಗ್ಪುರದಲ್ಲಿ ಓದಿದ್ದೇನೆ, ನನ್ನ ಬೋಧನಾ ಶುಲ್ಕ 32 ರೂ. ಆಗಿತ್ತು. ನನ್ನನ್ನು ಇಂಜಿನಿಯರ್ ಮಾಡಲು ದೇಶವೇ ಹಣ ಖರ್ಚು ಮಾಡಿದೆ.ಇಂದು ಇದು ನನ್ನ ಕರ್ತವ್ಯವಾಗಿದ್ದು, ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ನೀಡಲು ನಿರ್ಧರಿಸಿದ್ದೇನೆ.ನಾನು ಹಿಸಾರ್ನ ಅತ್ಯುತ್ತಮ ಶಾಲೆಯಲ್ಲಿ ಓದಿದೆ.ಬವಾನಾದ ಈ ಸರ್ಕಾರಿ ಶಾಲೆ ಆ ಶಾಲೆಗಿಂತ ಉತ್ತಮವಾಗಿದೆ” ಎಂದು ಹೇಳಿದರು.
”ಈಗ ದೆಹಲಿಯ ಗ್ರಾಮೀಣ ಪ್ರದೇಶದ ಮಕ್ಕಳು ಕೂಡ “ಸ್ಕೂಲ್ ಆಫ್ ಸ್ಪೆಶಲೈಸ್ಡ್ ಎಕ್ಸಲೆನ್ಸ್” ನಲ್ಲಿ ಅಧ್ಯಯನ ಮಾಡಲು ಅವಕಾಶವನ್ನು ಪಡೆಯುತ್ತಾರೆ. ಇಂಟರ್ನ್ಯಾಷನಲ್ ಬೋರ್ಡ್ ಆಫ್ ಎಜುಕೇಶನ್ IB ಸಿಲಬಸ್ ಲಭ್ಯವಿರುತ್ತದೆ. ಬವಾನಾ ಪ್ರದೇಶದ ಗ್ರಾಮವಾದ ದರಿಯಾಪುರದಲ್ಲಿ ಇಂದು ಈ ಅದ್ಭುತ ಶಾಲೆಯನ್ನು ಪ್ರಾರಂಭಿಸಲಾಗಿದೆ.ಭವ್ಯವಾದ ಕಟ್ಟಡ ಮತ್ತು ವಿಶ್ವ ದರ್ಜೆಯ ಶಿಕ್ಷಣ. ದೆಹಲಿಯ ಯಾವುದೇ ಪ್ರದೇಶದ ಮಕ್ಕಳಿಗೆ ಯಾವುದೇ ಸೌಲಭ್ಯಗಳ ಕೊರತೆಯನ್ನು ನಾವು ಮಾಡಿಕೊಡುವುದಿಲ್ಲ” ಎಂದರು.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಇದೇ ಪ್ರಕರಣದಲ್ಲಿ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ