ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ಗೆ ಈಗ ನನ್ನದೇ ಗೀಳು: ವಾದ್ರಾ
Team Udayavani, Mar 9, 2017, 11:44 AM IST
ಹೊಸದಿಲ್ಲಿ : ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಈಗ ನನ್ನದೇ ಗೀಳು; ಆತ ಅನಗತ್ಯವಾಗಿ ನನ್ನ ಬೆನ್ನಿಗೆ ಬಿದ್ದಿದ್ದಾರೆ; ಆತ ಜನರನ್ನು ನನ್ನ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ದಿಲ್ಲಿ ಮುಖ್ಯಮಂತ್ರಿಯ ನಿಘಂಟಿನಲ್ಲಿ ಅತೀ ಹೆಚ್ಚು ಹುಡುಕಲಾಗುತ್ತಿರುವ ಹೆಸರೆಂದರೆ ರಾಬರ್ಟ್ ವಾದ್ರಾ’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ, ಉದ್ಯಮಿ ರಾಬರ್ಟ್ ವಾದ್ರಾ ಅವರು ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದಾರೆ.
ಕೇಜ್ರಿವಾಲ್ ಅವರು ದಿಲ್ಲಿ ವಿಧಾನಸಭೆಯಲ್ಲಿ ಮೊನ್ನೆ ಮಂಗಳವಾರ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದರು.
“ಮೋದಿ ಅವರೇ ನೀವು ಆಪ್ ಸಚಿವ ಸತ್ಯೇಂದ್ರ ಜೈನ್ ಅವರನ್ನು ಮಾತ್ರವೇ ಬಂಧಿಸಬಹುದು; ದೀಕ್ಷಿತ್ ಅವರನ್ನು ಅಲ್ಲ; ನಿಮಗೆ ನಿಜಕ್ಕೂ 56 ಇಂಚಿನ ಎದೆ ಇರುವುದಾದರೆ ನೀವು ರಾಬರ್ಟ್ ವಾದ್ರಾ ವಿರುದ್ಧ ಧ್ವನಿ ಎತ್ತಬೇಕು. ಒಂದೊಮ್ಮೆ ನೀವು ಹಾಗೆ ಮಾಡಿದರೆ ವಾದ್ರಾ ನಿಮ್ಮನ್ನು ಜೀವಂತ ತಿಂದು ಹಾಕಿಯಾರು. ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ತಪ್ಪಿಗೆ ನೀವು ದಿಲ್ಲಿಯ ಅಮಾಯಕ ಜನರ ವಿರುದ್ಧ ಮುಯ್ಯಿ ತೀರಿಸಿಕೊಳ್ಳುತ್ತಿದ್ದೀರಿ; ನಮ್ಮ ಅಭಿವೃದ್ಧಿ ಕೆಲಸಗಳಿಗೆ ತಡೆಯೊಡ್ಡುತ್ತಿದ್ದೀರಿ; ಆದರೂ ಆ ಎಲ್ಲ ಅಡೆತಡೆಗಳ ಹೊರತಾಗಿಯೂ ನಾವು ಬಹಳಷ್ಟನ್ನು ಸಾಧಿಸಿದ್ದೇವೆ’ ಎಂದು ಕೇಜ್ರಿವಾಲ್ ರೋಷಾವೇಶದಿಂದ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!