ದಿಲ್ಲಿಯಲ್ಲಿ ಶತಮಾನದ ಚಳಿ: ಕನಿಷ್ಠ ತಾಪಮಾನ 9.4 ಡಿಗ್ರಿ ಸೆಲ್ಸಿಯಸ್‌


Team Udayavani, Dec 30, 2019, 8:58 PM IST

cold

– ಏರ್‌ಪೋರ್ಟ್‌ನಿಂದ 500ಕ್ಕೂ ಅಧಿಕ ವಿಮಾನ ಹಾರಾಟಕ್ಕೆ ಅಡ್ಡಿ

ನವದೆಹಲಿ: ಎರಡು ವಾರಗಳಿಂದ ಚಳಿ ಹೊಡೆತಕ್ಕೆ ಅಕ್ಷರಶಃ ನಡುಗುತ್ತಿರುವ ರಾಷ್ಟ್ರ ರಾಜಧಾನಿ ನವದೆಹಲಿ, ಸೋಮವಾರ “ಶತಮಾನದ ತೀವ್ರ ಚಳಿ’ಗೆ ಸಾಕ್ಷಿಯಾಗಿದೆ. ಸೋಮವಾರ ಕನಿಷ್ಠ 9.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, 1901ರಿಂದ ಈವರೆಗಿನ ಅತ್ಯಂತ ತೀವ್ರ ಚಳಿಯ ಡಿಸೆಂಬರ್‌ ತಿಂಗಳು ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್‌ನ ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಸೋಮವಾರದ ಉಷ್ಣಾಂಶ ಅರ್ಧದಷ್ಟು ಕಡಿಮೆಯಿತ್ತು. ಹೀಗಾಗಿ ಕಳೆದ 118 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳ “ತೀವ್ರ ಚಳಿ ದಿನ’ ಇದಾಗಿದೆ ಎಂದು ಪ್ರಾದೇಶಿಕ ಹವಾಮಾನ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್‌ ಶ್ರೀವಾಸ್ತವ್‌ ತಿಳಿಸಿದ್ದಾರೆ.

ಕಳೆದ 22 ವರ್ಷಗಳಿಂದ ನವದೆಹಲಿಯು ಅನಿಶ್ಚಿತ ಚಳಿಗಾಲಗಳನ್ನು ಎದುರಿಸುತ್ತಿದ್ದು, ಈ ಅವಧಿಯ ಕೆಲ ದಿನಗಳಲ್ಲಿ ಕನಿಷ್ಠ 3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿರುವ ಉದಾಹರಣೆಗಳೂ ಇವೆ. ಪ್ರಸಕ್ತ ವರ್ಷ ಡಿ.14ರಿಂದ ರಾಜಧಾನಿಯ ಜನತೆ ತೀವ್ರ ಚಳಿಗೆ ತತ್ತರಿಸಿ ಹೋಗಿದ್ದಾರೆ. ಸೋಮವಾರ ಮುಂಜಾನೆ ನವದೆಹಲಿಯನ್ನು ದಟ್ಟ ಮಂಜು ಆವರಿಸಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಮಾನ ಯಾನಕ್ಕೆ ಅಡ್ಡಿ: ರಸ್ತೆಗಳಲ್ಲಿನ ಸಂಚಾರ ದಟ್ಟಣೆಗೆ ಕುಖ್ಯಾತಿ ಪಡೆದಿರುವ ದೆಹಲಿಯ ಆಗಸದಲ್ಲೂ ಸೋಮವಾರ ಮಂಜಿನ ದಟ್ಟಣೆ ಸೃಷ್ಟಿಯಾಗಿತ್ತು. ಪರಿಣಾಮ 530 ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಯಿತು. ಈ ಪೈಕಿ ದೆಹಲಿ ನಿಲ್ದಾಣದಿಂದ ಹೊರಡಬೇಕಿದ್ದ 320 ವಿಮಾನಗಳು ಮತ್ತು ನಿಲ್ದಾಣಕ್ಕೆ ಬರಬೇಕಿದ್ದ 210 ವಿಮಾನಗಳು ನಿಗದಿತ ಸಮಯಕ್ಕೆ ಹಾರಲಿಲ್ಲ, ಬಂದಿಳಿಯಲಿಲ್ಲ. ಮಧ್ಯಾಹ್ನ 12.52ರ ನಂತರ ಮಂಜು ಸರಿದು, ವಿಮಾನಗಳ ಕಾರ್ಯಾಚರಣೆ ಆರಂಭವಾಯಿತು.

ಚಳಿಗೆ ತತ್ತರಿಸಿದ ಉತ್ತರ: ಸಾಮಾನ್ಯಕ್ಕಿಂತಲೂ ಅತೀ ಹೆಚ್ಚು ಚಳಿಯ ಹೊಡೆತದಿಂದಾಗಿ ಸೋಮವಾರ ಉತ್ತರ ಭಾರತದ ಪಂಜಾಬ್‌ ಹಾಗೂ ಹರ್ಯಾಣ ರಾಜ್ಯಗಳು ತತ್ತರಿಸಿ ಹೋಗಿವೆ. ಪಂಜಾಬ್‌ನ ಫ‌ರಿಕೋಟ್‌ನಲ್ಲಿ ಅತಿ ಕಡಿಮೆ; 0.7 ಕನಿಷ್ಠ ತಾಪಮಾನ ದಾಖಲಾಗಿದ್ದು, ಸಾಮಾನ್ಯ ತಾಪಮಾನಕ್ಕೆ ಹೋಲಿಸಿದರೆ ಆರು ಅಂಶಗಳಷ್ಟು ಕುಸಿದಿದೆ ಎಂದು ಹವಾಮಾನ ಇಲಾಖೆ ತಮಾಹಿತಿ ನೀಡಿದೆ.

ಆರು ಮಂದಿ ಸಾವು: ತೀವ್ರ ಸ್ವರೂಪದ ಚಳಿಯಿಂದಾಗಿ ನವದೆಹಲಿಯಲ್ಲಿ ಸೋಮವಾರ ಒಂದೇ ದಿನ ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಇದೇ ವೇಳೆ ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ದಾರಿ ಕಾಣದೆ ಕಾರೊಂದು ಕೆನಾಲ್‌ಗೆ ಬಿದ್ದ ಘಟನೆ ಗ್ರೇಟರ್‌ ನೋಯ್ಡಾದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಟ್ಟ ಮಂಜು ಆವರಿಸಿದ್ದರಿಂದ ರಸ್ತೆ ಕಾಣದೆ, ವಾಹನಗಳು ನಿಧಾನವಾಗಿ ಸಾಗಿದ್ದರಿಂದ ಬೆಳಗ್ಗೆಯೇ ತೀವ್ರ ಸಂಚಾರ ದಟ್ಟಣೆ ಉಂಟಾಗಿ, ಕಚೇರಿ, ಶಾಲೆಗೆ ಹೋಗುವವರು ಸಂಕಷ್ಟ ಅನುಭವಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.