ರೋಹಿಣಿ ಕೋರ್ಟ್ ಸ್ಫೋಟ: ಡಿಆರ್ಡಿಓ ವಿಜ್ಞಾನಿ ಬಂಧನ
ನೆರೆ ಮನೆಯ ವಕೀಲನ ವಿರುದ್ಧ ಸೇಡಿಗಾಗಿ ಈ ಕೃತ್ಯ
Team Udayavani, Dec 18, 2021, 9:45 PM IST
ನವದೆಹಲಿ: ಇತ್ತೀಚೆಗಷ್ಟೇ ದೆಹಲಿಯ ರೋಹಿಣಿ ಕೋರ್ಟ್ನಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣ ಸಂಬಂಧ ವಿಶೇಷ ಪೊಲೀಸರ ತಂಡ ಡಿಆರ್ಡಿಓ ವಿಜ್ಞಾನಿಯೊಬ್ಬರನ್ನು ಬಂಧಿಸಿದೆ.
ನೆರೆಮನೆಯಲ್ಲಿದ್ದ ವಕೀಲರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡುವ ಸಂಬಂಧ ಈ ಸ್ಫೋಟ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಡಿ.9ರಂದು ಕೋರ್ಟ್ ರೂ.102ರಲ್ಲಿ ಲಘು ತೀವ್ರತೆಯ ಬಾಂಬ್ ಸ್ಫೋಟವೊಂದು ಸಂಭವಿಸಿತ್ತು. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಡಿಆರ್ಡಿಓ ವಿಜ್ಞಾನಿಯನ್ನು ಬಂಧಿಸಲಾಗಿದೆ. ಸಿಸಿಟಿವಿಯಲ್ಲಿ ಎರಡು ಬಾರಿ ಇವರು ಕಂಡುಬಂದಿದ್ದಾರೆ.
ಒಮ್ಮೆ ಕೈಯಲ್ಲಿ ಬ್ಯಾಗ್ವೊಂದು ಇತ್ತು. ಮಗದೊಮ್ಮೆ ಬರೀ ಕೈಯಲ್ಲಿ ಹೋಗುತ್ತಿದ್ದರು. ಅನುಮಾನ ಬಂದು, ಅವರ ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಇವರು ಟಾರ್ಗೆಟ್ ಮಾಡಿದ್ದ ವ್ಯಕ್ತಿ ಇದೇ ಕೋರ್ಟ್ರೂಂನಲ್ಲಿ ಇದ್ದರು. ಹೀಗಾಗಿ ಆ ಕೋರ್ಟ್ ಕೊಠಡಿಗೇ ತೆರಳಿ ಟಿಫಿನ್ ಬಾಕ್ಸ್ವೊಂದರಲ್ಲಿ ಸ್ಫೋಟಕ ಇಟ್ಟು ಬಂದಿದ್ದರು.
ಇದನ್ನೂ ಓದಿ:ವ್ಯಕ್ತಿಯನ್ನು ಕೊಂದು ಗ್ರಾಮದಲ್ಲೇ ಹೂತಿಟ್ಟರು : ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ
ಬಂಧಿತ ವಿಜ್ಞಾನಿಯ ವಿಚಾರಣೆ ನಡೆಸಿದಾಗ, ಲಘುತೀವ್ರತೆಯ ಬಾಂಬ್ ತಯಾರಿಕೆಯ ಅರಿವು ತಮಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್
ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್ಪಿಎಫ್
ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್ ದೇವರಕೊಂಡ ವಾಹನ
ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ