ದಿಲ್ಲಿ ಸಿಎಸ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿ, ಸಿಸೋಡಿಯಾಗೆ ಜಾಮೀನು
Team Udayavani, Oct 25, 2018, 12:15 PM IST
ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಸಿಎಂ ನಿವಾಸದಲ್ಲೇ ಶಾಸಕರಿಂದ ನಡೆಯಿತೆನ್ನಲಾದ ಹಲ್ಲೆಯ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದಿಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ನಿವಾಸದಲ್ಲಿ ಈ ವರ್ಷ ಫೆ.19ರಂದು ನಡೆದಿತ್ತು. ಈ ಪ್ರಕರಣದ ಎಲ್ಲ ಆರೋಪಿಗಳಿಗೆ (ಅಮಾನತುಲ್ಲ ಖಾನ್ ಮತ್ತು ಪ್ರಕಾಶ್ ಜರವಾಲ್ ಅವರನ್ನು ಹೊರತು ಪಡಿಸಿ) ನ್ಯಾಯಾಲಯ ತಲಾ 50,000 ರೂ. ವೈಯಕ್ತಿಕ ಭದ್ರತೆಯ ಆಧಾರದಲ್ಲಿ ಜಾಮೀನು ಮಂಜೂರು ಮಾಡಿತು.
ಖಾನ್ ಮತ್ತು ಜರವಾಲ್ ಅವರಿಗೆ ದಿಲ್ಲಿ ನ್ಯಾಯಾಲಯ ಈ ಹಿಂದೆಯೇ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣವನ್ನು ನ್ಯಾಯಾಲಯ ಈಗಿನ್ನು ಡಿ.7ಕ್ಕೆ ವಿಚಾರಣೆಗೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್