ತಿಹಾರ್ ಜೈಲಿಗೆ ಮಾಜಿ ಗೃಹ ಸಚಿವ ಪಿ.ಚಿದಂಬರಂ
Team Udayavani, Sep 5, 2019, 6:27 PM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಹಗಣರದ ಆರೋಪಿ, ಮಾಜಿ ಕೇಂದ್ರ ಗೃಹಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅದರಂತೆ ಸೆ.19ರವರೆಗೆ ಅವರನ್ನು ತಿಹಾರ್ ಜೈಲಿನಲ್ಲಿಡಲಾಗುತ್ತದೆ. ಆದರೆ ತಮಗೆ ಪ್ರತ್ಯೇಕ ಸೆಲ್, ಪಾಶ್ಚಿಮಾತ್ಯ ಶೈಲಿಯ ಶೌಚಾಲಯ, ಔಷಧಗಳು ಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ. ಚಿದಂಬರಂ ಈಗಾಗಲೇ 15 ದಿನಗಳನ್ನು ಸಿಬಿಐ ಕಸ್ಟಡಿಯಲ್ಲಿ ಇಡಲಾಗುತ್ತದೆ.
ಇಂದಿನ ವಿಚಾರಣೆ ವೇಳೆ ಚಿದಂಬರಂ ವಕೀಲರು, ಅವರನ್ನು ಬೇಕಾದರೆ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಬಹುದು, ನ್ಯಾಯಾಂಗ ಬಂಧನವೇಕೆ ಎಂದು ವಾದ ಮಾಡಿದರು. ಆದರೆ ಇದಕ್ಕೊಪ್ಪದ ನ್ಯಾಯಾಲಯ ಆಪಾದಿತರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ನ್ಯಾಯಾಂಗ ಬಂಧನ ಸೂಕ್ತವಾಗಿದೆ ಎಂದಿತು.
ಕಳೆದ 15 ದಿನಗಳ ಬಂಧನದ ಅವಧಿಯಲ್ಲಿ ಸಿಬಿಐ ಕಟ್ಟಡದ ಒಂದು ರೂಮಿನಲ್ಲಿ ಚಿದಂಬರಂ ಅವರನ್ನು ಇಡಲಾಗಿತ್ತು. ಈ ಮೊದಲು ತಿಹಾರ್ ಜೈಲಿಗೆ ಕಳಿಸುವುದಕ್ಕೂ ಚಿದಂಬರಂ ಪರ ವಕೀಲರು ಆಕ್ಷೇಪವೆತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ