ಮತದಾನಕ್ಕೆ ಅಡ್ಡಿ ಪ್ರಕರಣ; ಆಪ್ ಶಾಸಕನಿಗೆ 3 ತಿಂಗಳ ಜೈಲುಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
Team Udayavani, Jun 25, 2019, 3:04 PM IST
ನವದೆಹಲಿ: 2003ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಗೆ ದೆಹಲಿ ಕೋರ್ಟ್ ಮಂಗಳವಾರ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದೆ.
ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್, ಹತ್ತು ಸಾವಿರ ರೂಪಾಯಿ ಬಾಂಡ್ ಮೇಲೆ ಮನೋಜ್ ಕುಮಾರ್ ಗೆ ಜಾಮೀನು ನೀಡಿದ್ದು, ಕುಮಾರ್ ಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
ಚುನಾವಣಾ ಮತದಾನ ಪ್ರಕ್ರಿಯೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಸಾರ್ವಜನಿಕರ ಮತದಾನಕ್ಕೆ ತೊಂದರೆ ಕೊಟ್ಟ ಪ್ರಕರಣದಲ್ಲಿ ಕೋರ್ಟ್ ಜೂನ್ 11ರಂದು ಕುಮಾರ್ ದೋಷಿ ಎಂದು ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು