ಸುನಂದಾ ಕೇಸ್: ತರೂರ್ಗೆ ಸಂಕಷ್ಟ; ಕೋರ್ಟ್ಗೆ ಹಾಜರಾಗಲು ಸಮನ್ಸ್ !
Team Udayavani, Jun 5, 2018, 3:52 PM IST
ಹೊಸದಿಲ್ಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಪತಿ, ಕಾಂಗ್ರೆಸ್ ನಾಯಕ,ಸಂಸದ ಶಶಿ ತರೂರ್ಗೆ ದೆಹಲಿ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 7 ಕ್ಕೆ ಕೋರ್ಟ್ಗೆ ಖುದ್ದು ತರೂರ್ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ಪ್ರಕರಣದ ತನಿಖೆಯಲ್ಲಿ ಅಪರಾಧಗಳ ಆಯೋಗಕ್ಕೆ ತರೂರ್ ವಿರುದ್ಧ ಮುಂದುವರಿಯಲು ಸಾಕಷ್ಟು ಆಧಾರಗಳಿರುವ ಹಿನ್ನಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ.
ಮೇ 14 ರಂದು ದೆಹಲಿ ಪೊಲೀಸರು ತರೂರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. 2014 ರ ಜನವರಿ 17 ರಂದು ದೆಹಲಿಯ ಹೊಟೇಲ್ನಲ್ಲಿ ಸುದಂದಾ ಶವವಾಗಿ ಪತ್ತೆಯಾಗಿದ್ದರು. 2015 ರ ಜನವರಿ 1 ರಂದು ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
3,000 ಪುಟಗಳ ಪೊಲೀಸರ ಚಾರ್ಜ್ ಶೀಟ್ನಲ್ಲಿ ಶಶಿ ತರೂರ್ ಓರ್ವರೇ ಆರೋಪಿಯಾಗಿದ್ದಾರೆ.
ಶಶಿ ತರೂರ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆಯುತ್ತಾರಾ, ಇಲ್ಲ ಜೈಲು ಪಾಲಗುತ್ತಾರೋ ಎನ್ನುವುದು ಜೂನ್ 7 ರಂದು ತೀರ್ಮಾನವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ