ನಿರ್ಭಯಾ ಅತ್ಯಾಚಾರಿಗಳಿಗೆ ನಾಳೆ ಗಲ್ಲು ಇನ್ನೂ ಡೌಟ್
ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
Team Udayavani, Mar 2, 2020, 2:14 PM IST
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ವಿಚಾರಣಾ ನ್ಯಾಯಾಲಯದಿಂದ ಘೋಷಿಸಲ್ಪಟ್ಟು ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ನಿಗದಿಯಾಗಿರುವ ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಯಾಗುವ ಕುರಿತು ಇದೀಗ ಗೊಂದಲ ಉಂಟಾಗಿದೆ.
ನಿರ್ಭಯಾ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ಹೊರಡಿಸಲಾಗಿರುವ ಡೆತ್ ವಾರಂಟ್ ಗೆ ತಡೆ ನೀಡಬೇಕು ಎಂದು ಅಪರಾಧಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯವು ಇಂದು ತಿರಸ್ಕರಿಸಿದೆ.
ಆದರೆ ತಕ್ಷಣವೇ ಅಪರಾಧಿಗಳಲ್ಲಿ ಒಬ್ಬನಾಗಿರುವ ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾನೆ. ಹಾಗಾಗಿ ನಿರ್ಭಯಾ ಅತ್ಯಾಚಾರಿಗಳನ್ನು ನಾಳೆ ಗಲ್ಲಿಗೇರಿಸುವ ಕುರಿತಾದ ಗೊಂದಲ ಇನ್ನೂ ಮುಂದುವರೆದಿದೆ.
2012 Delhi gangrape case: Advocate AP Singh has informed Delhi’s Patiala House Court that death row convict Pawan’s mercy petition has been filed before the President. https://t.co/TzPkDdfzvi
— ANI (@ANI) March 2, 2020
ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿರುವ ವಿಚಾರವನ್ನು ಆತನ ವಕೀಲರು ನ್ಯಾಯಾಲಯಕ್ಕೆ ತಿಳಿಸಿ, ಈ ಹಿನ್ನಲೆಯಲ್ಲಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ವಕೀಲರು ಮನವಿ ಮಾಡಿದಾಗ ಮಧ್ಯಾಹ್ನ 2 ಗಂಟೆಯ ಬಳಿಕ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sadhguru; ಕಾವೇರಿ ಕಾಲಿಂಗ್ ಮೂಲಕ 10.9 ಕೋಟಿ ಸಸಿಗಳ ನಾಟಿ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು