Excise Policy Case: ದೆಹಲಿ ಸಿಎಂ ಕೇಜ್ರಿವಾಲ್ಗೆ ಜಾರಿ ನಿರ್ದೇಶನಾಲಯದಿಂದ 5ನೇ ಸಮನ್ಸ್
Team Udayavani, Jan 31, 2024, 3:31 PM IST
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಐದನೇ ಸಮನ್ಸ್ ಜಾರಿ ಮಾಡಿದೆ ಅದರಂತೆ ಮುಂದಿನ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥರಿಗೆ ಇದು ಐದನೇ ಸಮನ್ಸ್ ಆಗಿದೆ. ಇದಕ್ಕೂ ಮುನ್ನ ಜನವರಿ 13ರಂದು ಕೇಜ್ರಿವಾಲ್ಗೆ ನಾಲ್ಕನೇ ಬಾರಿ ಸಮನ್ಸ್ ಜಾರಿ ಮಾಡಿದ್ದ ಕೇಂದ್ರೀಯ ಸಂಸ್ಥೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ದೆಹಲಿ ಮುಖ್ಯಮಂತ್ರಿ ಇದನ್ನು “ಅಕ್ರಮ ಮತ್ತು ರಾಜಕೀಯ ಪ್ರೇರಿತ” ಎಂದು ಕರೆದು ವಿಚಾರಣೆಯಿಂದ ಹಿಂದೆಸರಿದಿದ್ದರು.
ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯುವುದು ಬಿಜೆಪಿಯ ಉದ್ದೇಶವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಆರೋಪಿಸಿದೆ.
ಕೇಜ್ರಿವಾಲ್ ಅವರು ನವೆಂಬರ್ 2, ಡಿಸೆಂಬರ್ 22 ಮತ್ತು ಜನವರಿ 3 ರಂದು ನೀಡಿದ ಮೂರು ಸಮನ್ಸ್ಗಳನ್ನು ತಿರಸ್ಕರಿಸಿದ್ದರು.
ಇದನ್ನೂ ಓದಿ: Snowfall: ಭಾರೀ ಹಿಮಪಾತ… ಅಟಲ್ ಸುರಂಗದ ಬಳಿ ಸಿಲುಕಿಕೊಂಡ 300 ಪ್ರವಾಸಿಗರ ರಕ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ