Delhi Excise Policy Case: 5 ಕೋಟಿ ಲಂಚ ಪಡೆದ ಇ.ಡಿ ಅಧಿಕಾರಿ ಸಿಬಿಐ ಬಲೆಗೆ


Team Udayavani, Aug 29, 2023, 9:46 AM IST

Delhi Excise Policy Case:  ED officer who received 5 crore bribe caught by CBI

ಹೊಸದಿಲ್ಲಿ: ದಿಲ್ಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಸುಮಾರು ಐದು ಕೋಟಿ ರೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಯನ್ನು ಸಿಬಿಐ ಸೋಮವಾರ ಬಂಧಿಸಿದೆ.

ಅಬಕಾರಿ ನೀತಿ ಪ್ರಕರಣದ ಆರೋಪಿ ಅಮನ್‌ದೀಪ್ ಸಿಂಗ್ ಧಲ್ ಅವರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಇ.ಡಿ ಸಹಾಯಕ ನಿರ್ದೇಶಕ ಪವನ್ ಖತ್ರಿ ಎಂಬ ಅಧಿಕಾರಿಯನ್ನು ಬಂಧಿಸಲಾಗಿದೆ.

ಜಾರಿ ನಿರ್ದೇಶನಾಲಯದ ಕೋರಿಕೆಯ ಮೇರೆಗೆ ಪವನ್ ಖತ್ರಿ ಮತ್ತು ಕ್ಲರ್ಕ್ ನಿತೇಶ್ ಕೊಹರ್ ವಿರುದ್ದ ಸಿಬಿಐ ಎಫ್ಐಆರ್ ದಾಖಲಿಸಿದೆ. ಏರ್ ಇಂಡಿಯಾ ಉದ್ಯೋಗಿ ದೀಪಕ್ ಸಾಂಗ್ವಾನ್, ಬಂಧಿತ ಉದ್ಯಮಿ ಅಮನ್‌ದೀಪ್ ಸಿಂಗ್ ಧಲ್, ಗುರುಗ್ರಾಮ್ ನಿವಾಸಿ ಬಿರೇಂದರ್ ಪಾಲ್ ಸಿಂಗ್, ಚಾರ್ಟರ್ಡ್ ಅಕೌಂಟೆಂಟ್ ಪ್ರವೀಣ್ ಕುಮಾರ್ ವಾಟ್ಸ್, ಕ್ಲಾರಿಡ್ಜಸ್ ಹೊಟೇಲ್‌ ನ ಸಿಇಒ ವಿಕ್ರಮಾದಿತ್ಯ ಮತ್ತು ಇತರ ಕೆಲವು ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಅಬಕಾರಿ ಪ್ರಕರಣದ ತನಿಖೆಯಲ್ಲಿ ತಮಗೆ ಸಹಾಯ ಮಾಡುವಂತೆ ಅಮನ್‌ದೀಪ್ ಸಿಂಗ್ ಧಲ್ ಮತ್ತು ದೀಪಕ್ ಸಂಗ್ವಾನ್ ಅವರು 2022ರ ಡಿಸಂಬರ್ ಮತ್ತು ಜನವರಿ 2023ರ ನಡುವೆ ಪ್ರವೀಣ್ ವಾಟ್ಸ್ ಅವರಿಗೆ ಐದು ಕೋಟಿ ರೂ ನೀಡಿದ್ದರು ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:Birds ರಾಜ್ಯದ ಪಕ್ಷಿ ಪ್ರಭೇದಕ್ಕೆ ಕುತ್ತು: ಹಕ್ಕಿಗಳ ಸ್ಥಿತಿಗತಿ ವರದಿಯಲ್ಲಿ ಆತಂಕ

ಇ.ಡಿಗೆ ನೀಡಿದ ಹೇಳಿಕೆಯಲ್ಲಿ, ಪ್ರವೀಣ್ ವತ್ಸ್ ಅವರು ಕೆಲವು ಹಣದ ಬದಲಾಗಿ ಅಮನ್ ದೀಪ್ ಧಲ್ ಅವರನ್ನು ಬಂಧಿಸದಂತೆ ರಕ್ಷಿಸಲು ಸಹಾಯ ಮಾಡುವುದಾಗಿ ದೀಪಕ್ ಸಾಂಗ್ವಾನ್ ಅವರಿಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಸಂಗ್ವಾನ್ ಡಿಸೆಂಬರ್ 2022 ರಲ್ಲಿ ಇಡಿ ಅಧಿಕಾರಿ ಪವನ್ ಖಾತ್ರಿಗೆ ವ್ಯಾಟ್ಸ್ ಅನ್ನು ಪರಿಚಯಿಸಿದ್ದರು.

ಅಮನ್‌ದೀಪ್ ಸಿಂಗ್ ನಿಂದ ಪಡೆದ ಹಣದಿಂದ 50 ಲಕ್ಷ ರೂ ವನ್ನು ದೀಪಕ್ ಸಂಗ್ವಾನ್ ಮತ್ತು ಪವನ್ ಖತ್ರಿ ಅವರಿಗೆ ಅಡ್ವಾನ್ಸ್ ರೂಪದಲ್ಲಿ ನೀಡಿದ್ದೆ. ನಗದು ರೂಪದಲ್ಲಿ 2022ರ ಡಿಸೆಂಬರ್ ನಲ್ಲಿ ಹೋಟೆಲ್ ಐಟಿಸಿ ವಸಂತ್ ವಿಹಾರ್ ನ ಪಾರ್ಕಿಂಗ್ ಪ್ರದೇಶದಲ್ಲಿ ನೀಡಲಾಗಿತ್ತು ಎಂದು ಪ್ರವೀಣ್ ವಾಟ್ಸ್ ಇಡಿ ಮುಂದೆ ಹೇಳಿಕೆ ನೀಡಿದ್ದರು.

ಹಣ ನೀಡಿದ ಬಳಿಕವೂ ಅಂದರೆ 2023ರ ಮಾರ್ಚ್ 1ರಂದು ಇಡಿ ಅಧಿಕಾರಿಗಳು ಅಮನ್‌ದೀಪ್ ಸಿಂಗ್ ನನ್ನು ಪ್ರಕರಣದಲ್ಲಿ ಬಂಧಿಸಿದ್ದರು. ಈ ವೇಳೆ ದೀಪಕ್ ಸಾಂಗ್ವಾನ್ ಅವರನ್ನು ಭೇಟಿಯಾದ ಪ್ರವೀಣ್ ವತ್ಸ್, ಬಂಧನದ ಸೂಚನೆಗಳು ಉನ್ನತ ಅಧಿಕಾರಿಗಳಿಂದ ಬಂದವು. ಅವರ ಮೇಲೆ ತಮ್ಮ ಪ್ರಭಾವ ನಡೆಯುವುದಿಲ್ಲ ಎಂದು ಹೇಳಿದ್ದರು.

ಇದಾದ ಬಳಿಕ ಇ.ಡಿ ಅಧಿಕಾರಿಗಳೇ ಲಂಚ ಪಡೆದಿರುವ ಮಾಹಿತಿ ಉನ್ನತ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಇದರ ತನಿಖೆ ನಡೆಸಿ ಪ್ರವೀಣ್ ಮನೆಯಿಂದ 2.19 ಕೋಟಿ ನಗದು, 1.94 ಕೋಟಿ ಬೆಲೆಯ ಚಿನ್ನ ಮತ್ತು ಬ್ಯಾಂಕ್ ಖಾತೆಯಿಂದ 2.62 ಹಣವನ್ನು ಜಪ್ತಿ ಮಾಡಲಾಗಿತ್ತು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.