ಹೊತ್ತಿ ಉರಿದ ಮನೆ: ಮೂವರು ಮಹಿಳೆಯರು ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ
Team Udayavani, Dec 15, 2019, 9:40 AM IST
ನವದೆಹಲಿ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮೂವರು ಮಹಿಳೆಯರು ಸಜೀವ ದಹನವಾಗಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಾಲಿಮಾರ್ ಭಾಗ್ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಮೃತಪಟ್ಟವರನ್ನು ಕಾಂತ (75), ಕಿರಣ್ ಶರ್ಮಾ (65) ಸೋಮ್ ವತಿ(42) ಎಂದು ಹೇಳಲಾಗಿದೆ.
ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಕಿ ಅವಘಡವಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮನೆಯಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ. ಆದರೇ ಅದರಲ್ಲಿ ಮೂವರು ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಾಯಗೊಂಡವರನ್ನು ಲಜ್ ವಂತಿ, ಈನಾ, ಅಕ್ಷಿತ್ ಮತ್ತು ವನ್ಸಿಕಾ ಎಂದು ಗುರುತಿಸಲಾಗಿದೆ.
ವಾರದ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿನ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ, ದಿಢೀರ್ ಅಗ್ನಿ ಅವಘಡ ಸಂಭವಿಸಿ, ಬೆಂಕಿಯ ಕೆನ್ನಾಲಗೆಗೆ ಸಿಲುಕಿ 43 ಜನ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?