ದಿಲ್ಲಿ ಹೊಟೇಲ್ ಅಗ್ನಿ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
Team Udayavani, Feb 12, 2019, 6:11 AM IST
ಹೊಸದಿಲ್ಲಿ : ಮಧ್ಯ ದಿಲ್ಲಿಯ ಕರೋಲ್ ಬಾಗ್ ನಲ್ಲಿ ಇಂದು ಮಂಗಳವಾರ 17 ಜನರನ್ನು ಬಲಿ ಪಡೆದಿರುವ ಹೊಟೇಲ್ ಅಗ್ನಿ ದುರಂತದ ಬಗ್ಗೆ ದಿಲ್ಲಿ ಸರಕಾರ ಮ್ಯಾಜಿಸ್ಟ್ರೇಟರ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಅಗ್ನಿ ದುರಂತದ ಸುದ್ದಿ ತಿಳಿದೊಡನೆಯೇ ನಸುಕಿನ ವೇಳೆ ಅರ್ಪಿತ್ ಪ್ಯಾಲೇಸ್ ಹೊಟೇಲ್ಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ ಸಚಿವ ಜೈನ್ ಅವರು, ದಿಲ್ಲಿಯಲ್ಲಿನ ಐದು ಮತ್ತು ಐದಕ್ಕಿಂತ ಹೆಚ್ಚು ಮಹಡಿಗಳ ಕಟ್ಟಡಗಳಲ್ಲಿನ ಅಗ್ನಿ ಸುರಕ್ಷೆ ಮತ್ತು ಮುಂಜಾಗ್ರತೆ ವ್ಯವಸ್ಥೆಯ ಬಗ್ಗೆ ತಪಾಸಣೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ತಾನು ಅಗ್ನಿ ಶಾಮಕ ದಳವನ್ನು ಕೇಳಿಕೊಂಡಿರುವುದಾಗಿ ತಿಳಿಸಿದರು.
17 ಜನರನ್ನು ಬಲಿ ಪಡೆದಿರುವ ಅಗ್ನಿ ದುರಂತ ಸಂಭವಿಸಿರುವ ದಿಲ್ಲಿ ಹೊಟೇಲ್ನಲ್ಲಿ ಕೆಲವೊಂದು ಲೋಪಗಳು ಇದ್ದುದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ; ತಪ್ಪುಗಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜೈನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ