ಕೋವಿಡ್ ಆರೈಕೆ ಕೇಂದ್ರವಾಗಿ ಬದಲಾದ ಮಸೀದಿ !
Team Udayavani, Apr 30, 2021, 5:17 PM IST
ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಗ್ರೀನ್ ಪಾರ್ಕ್ ಮಸೀದಿ ಇದೀಗ ಕೋವಿಡ್ ರೋಗಿಗಳ ಆರೈಕೆ ಕೇಂದ್ರವಾಗಿ ಬದಲಾಗಿದೆ.
ನವದೆಹಲಿಯಲ್ಲಿ ಕೋವಿಡ್ ಎರಡನೇ ಅಲೆ ಮಿತಿಮೀರಿ ವ್ಯಾಪಿಸುತ್ತಿದೆ. ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಏರಿಕೆ ನಾಗಾಲೋಟ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಸಹ ಎದುರಾಗಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕ್ರೀಡಾಂಗಣ ಸೇರಿದಂತೆ ಹಲವು ಸಾರ್ವಜನಿಕ ಪ್ರದೇಶಗಳನ್ನು ಕೋವಿಡ್ ರೋಗಿಗಳ ಆರೈಕೆ ಕೇಂದ್ರಗಳನ್ನಾಗಿ ಮಾರ್ಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅಲ್ಲಿಯ ಸರ್ಕಾರದ ಜೊತೆ ಕೈ ಜೋಡಿಸಿರುವ ಗ್ರೀನ್ ಪಾರ್ಕ್ ಮಸೀದಿ, ಪ್ರಾರ್ಥನೆ ಸಲ್ಲಿಸುವ ಜಾಗವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಿಟ್ಟು ಕೊಟ್ಟಿದೆ.
ಮಸೀದಿಯಲ್ಲಿ 10 ಬೆಡ್ಗಳನ್ನು ಹಾಕಲಾಗಿದೆ. ಕೋವಿಡ್ ರೋಗಿಗಳಿಗೆ ಔಷಧಿ, ಮಾಸ್ಕ್, ಸಾನಿಟೈಸ್, ಹಾಗೂ ಪಿಪಿಇ ಕಿಟ್ಗಳನ್ನು ನೀಡಲಾಗುತ್ತಿದೆ. ಅದೇ ರೀತಿ ರೋಗಿಗಳಿಗೆ ಊಟವನ್ನು ಒದಗಿಸಲಾಗುತ್ತದೆ ಎಂದು ಮಸೀದಿಯ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬೆಡ್ಗಳ ಕೊರತೆ ಬಗ್ಗೆ ಕೆಲ ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿಕೊಂಡಿದ್ದು. ಕೂಡಲೇ ಬೆಡ್ ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಕೂಡ ಬೆಡ್ ನೀಡಿದ್ದು, ಕೆಲವು ಸಂಘ-ಸಂಸ್ಥೆಗಳು ಕೋವಿಡ್ ವಿರುದ್ಧದ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್