Delhi ಗಟಾರವಾಗಿದೆ..ಎಚ್ಚೆತ್ತುಕೊಳ್ಳಿ ಜನರೇ : ಸಂಸದ ಗಂಭೀರ್
ಯಾವುದೂ ಉಚಿತವಲ್ಲ...ಆಪ್ ಸರಕಾರದ ವಿರುದ್ಧ ಆಕ್ರೋಶ
Team Udayavani, Jul 13, 2023, 4:22 PM IST
ಹೊಸದಿಲ್ಲಿ: ಐಟಿಒ ಮತ್ತು ಸಿವಿಲ್ ಲೈನ್ಗಳಂತಹ ಪ್ರದೇಶಗಳಿಗೆ ಗುರುವಾರ ಯಮುನಾ ನೀರು ನುಗ್ಗಿದ ಬಳಿಕ ‘ನಗರವು ಗಟಾರವಾಗಿ ಮಾರ್ಪಟ್ಟಿದೆ’ ಎಂದು ಹೇಳುವ ಮೂಲಕ ದೆಹಲಿ ಬಿಜೆಪಿ ಕೇಜ್ರಿವಾಲ್ ಸರಕಾರದ ವಿರುದ್ಧ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ.
ಸಂಸದ ಗೌತಮ್ ಗಂಭೀರ್ ಆಪ್ ಸರ್ಕಾರದ ಉಚಿತ ವಿದ್ಯುತ್ ಮತ್ತು ನೀರು ಸರಬರಾಜು ಯೋಜನೆಗಳನ್ನು ಉಲ್ಲೇಖಿಸಿ, ”ಏನೂ ಉಚಿತ ಅಲ್ಲದ ಕಾರಣ ಎಚ್ಚರಗೊಳ್ಳಲು ಇದು ಸಕಾಲ” ಎಂದು ದೆಹಲಿಯ ಜನರನ್ನು ಕೇಳಿಕೊಂಡಿದ್ದಾರೆ. “ದೆಹಲಿಯ ಜನರೇ ಎದ್ದೇಳಿ. ದೆಹಲಿ ಗಟಾರವಾಗಿ ಮಾರ್ಪಟ್ಟಿದೆ. ಯಾವುದೂ ಉಚಿತವಾಗಿಲ್ಲ, ಇದಕ್ಕೆ ಬೆಲೆ ನೀಡಬೇಕು!!” ಎಂದು ಟ್ವೀಟ್ ಮಾಡಿದ್ದಾರೆ.
Wake up Delhiites
Delhi has become a gutter
Nothing is for free, this is the PRICE!!— Gautam Gambhir (@GautamGambhir) July 13, 2023
”ಅಭಿವೃದ್ಧಿ ಕಾಮಗಾರಿಗಳ ಹಣ ಪ್ರಚಾರಕ್ಕೆ ವ್ಯಯಿಸಿದ ಕಾರಣ ದೆಹಲಿ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ! ನಾನು ನಿರಂತರವಾಗಿ ಪರಿಹಾರ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಪ್ರತಿದಿನವೂ ನಮ್ಮ ಜನ್ ರಸೋಯಿಯಿಂದ ಎಲ್ಲಾ ಸಂತ್ರಸ್ತರಿಗೆ ಆಹಾರವನ್ನು ತಲುಪಿಸಲಾಗುವುದು!” ಎಂದು ಸಂಸದ ಗಂಭೀರ್ ಟ್ವೀಟ್ ಮಾಡಿದ್ದಾರೆ.
ಪ್ರವಾಹ ಬಯಲು ಪ್ರದೇಶದಿಂದ ಸ್ಥಳಾಂತರಿಸಲ್ಪಟ್ಟ ಜನರ ಭೇಟಿ ಸಂದರ್ಭದಲ್ಲಿ ಬುಧವಾರ ಕೇಜ್ರಿವಾಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಗಂಭೀರ್, ಆಪ್ ಸರಕಾರ ಒಂಬತ್ತು ವರ್ಷಗಳಲ್ಲಿ ಕೇವಲ ಆರೋಪಗಳ ರಾಜಕಾರಣ ಹೊರತುಪಡಿಸಿ ಮೂಲಸೌಕರ್ಯಕ್ಕಾಗಿ ಒಂದು ಪೈಸೆ ಸಹ ಖರ್ಚು ಮಾಡಿಲ್ಲಕೇವಲ ಬಿಟ್ಟಿ ರಾಜಕೀಯ ಮಾಡಿ ಜನರನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಆರೋಪಿಸಿದ್ದರು.
ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವುದರಿಂದ ಗುರುವಾರ ಮಧ್ಯಾಹ್ನ 1 ಗಂಟೆಗೆ ಯಮುನಾದಲ್ಲಿ ನೀರಿನ ಮಟ್ಟ 208.62 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್ಗಳಷ್ಟು ಹೆಚ್ಚಿದೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ, ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಭಾನುವಾರದವರೆಗೆ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ತುರ್ತು ಸೇವೆಯಲ್ಲಿರುವವರನ್ನು ಹೊರತುಪಡಿಸಿ ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ