LG ಕಚೇರಿಯಲ್ಲಿ ಕೇಜ್ರಿವಾಲ್ಗೆ ಧರಣಿ ಕೂರಲು ಬಿಟ್ಟವರು ಯಾರು ?
Team Udayavani, Jun 18, 2018, 1:15 PM IST
ಹೊಸದಿಲ್ಲಿ : ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ಕೂರುವುದಕ್ಕೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಕೆಲವು ಸಂಪುಟ ಸದಸ್ಯರಿಗೆ ಅನುಮತಿ ಕೊಟ್ಟವರು ಯಾರು ಎಂದು ದಿಲ್ಲಿ ಹೈಕೋರ್ಟ್ ಇಂದು ದಿಲ್ಲಿ ಸರಕಾರಕ್ಕೆ ಖಡಕ್ ಪ್ರಶ್ನೆ ಕೇಳಿದೆ.
“ಸಾಮಾನ್ಯವಾಗಿ ಯಾವುದೇ ರೀತಿಯ ಪ್ರತಿಭಟನೆಗಳನ್ನು ಕಚೇರಿ ಕಟ್ಟಡಗಳ ಹೊರಗೆ ನಡೆಸಲಾಗುತ್ತದೆಯೇ ಹೊರತು ಒಳಗಲ್ಲ” ಎಂದು ದಿಲ್ಲಿ ಹೈಕೋರ್ಟ್ ಹೇಳಿತು.
ದಿಲ್ಲಿ ಸರಕಾರದ ಐಎಎಸ್ ಅಧಿಕಾರಿಗಳ ಆರೋಪಿತ ಮುಷ್ಕರದ ವಿರುದ್ಧ ಆಪ್ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಇತರರು ಎಲ್ಜಿ ಕಾರ್ಯಾಲಯದಲ್ಲಿ ಧರಣಿ ಕೂರಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಎರಡು ಅರ್ಜಿಗಳನ್ನು ಇಂದು ದಿಲ್ಲಿ ಹೈಕೋರ್ಟಿನ ಜಸ್ಟಿಸ್ ಎ ಕೆ ಚಾವ್ಲಾ ಮತ್ತು ಜಸ್ಟಿಸ್ ನವೀನ್ ಚಾವ್ಲಾ ಅವರನ್ನು ಒಳಗೊಂಡ ಪೀಠವು ವಿಚಾರಣೆಗೆ ಎತ್ತಿಕೊಂಡಿತು.
“ಎಲ್ಜಿ ಕಾರ್ಯಾಲಯದ ಒಳಗೆ ಧರಣಿ ಕೂರುವುದಕ್ಕೆ ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಪುಟದ ಕೆಲವರಿಗೆ ಅವಕಾಶ ಕೊಟ್ಟವರು ಯಾರು ? ಒಂದು ವೇಳೆ ಇದು ಧರಣಿ ಮುಷ್ಕರ ಎಂದಾದರೆ ಅದನ್ನು ಕಟ್ಟಡದ ಹೊರಗೆ ನಡೆಸಬೇಕೇ ಹೊರತು ಒಳಗಲ್ಲ’ ಎಂದು ಎರಡು ವಿಷಯಗಳಿಗೆ ಸಂಬಂಧಿಸಿ ಕೋರ್ಟಿನಲ್ಲಿ ದಿಲ್ಲಿ ಸರಕಾರದ ಪರವಾಗಿ ಹಾಜರಿದ್ದ ವಕೀಲರನ್ನು ನ್ಯಾಯಾಧೀಶರು ಕಟುವಾಗಿ ಪ್ರಶ್ನಿಸಿದರು.
ದಿಲ್ಲಿ ಲೆ| ಗವರ್ನರ್ ಅನಿಲ್ ಬೈಜಾಲ್ ಅವರ ಕಾರ್ಯಾಲಯದಲ್ಲಿ ಕೇಜ್ರಿವಾಲ್ ಮತ್ತು ಇತರರು ಧರಣಿ ಕೂರಿರುವುದನ್ನು ಪ್ರಶ್ನಿಸಿ ದಿಲ್ಲಿ ವಿಧಾನ ಸಭೆಯ ವಿಪಕ್ಷ ನಾಯಕ ವಿಜೇಂದ್ರ ಗುಪ್ತಾ ಅವರು ಕೂಡ ಅರ್ಜಿ ಸಲ್ಲಿಸಿದ್ದಾರೆ.
ಈ ಎಲ್ಲ ಅರ್ಜಿಗಳ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜೂ.22ಕ್ಕೆ ನಿಗದಿಸಿತು.
ಈ ವಿಷಯಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿಗಳನ್ನು ಪ್ರತಿನಿಧಿಸುವ ಸಂಘವನ್ನು ಕೂಡ ಕಕ್ಷಿದಾರನನ್ನಾಗಿ ಮಾಡಬೇಕು ಎಂದು ಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ