ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು


Team Udayavani, Feb 9, 2023, 12:20 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

ಹೊಸದಿಲ್ಲಿ: ಎನ್‌ ಎಸ್‌ ಇ ಉದ್ಯೋಗಿಗಳ ಅಕ್ರಮ ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಈಗಾಗಲೇ ಆಕೆಗೆ ಜಾಮೀನು ನೀಡಿತ್ತು.

ಐಸೆಕ್ – ಸೈಬರ್ ಸೆಕ್ಯುರಿಟಿ ಸಂಸ್ಥೆಯು ಎನ್‌ಎಸ್‌ಇ ಉದ್ಯೋಗಿಗಳ ಫೋನ್‌ಗಳನ್ನು ಅಕ್ರಮವಾಗಿ ಟ್ಯಾಪ್ ಮಾಡುವ ಮೂಲಕ 4.54 ಕೋಟಿ ರೂಪಾಯಿ ಗಳಿಸಿದ್ದಾರೆ ಎಂದು ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದರು. ಸೈಬರ್ ದೋಷಗಳ ಅಧ್ಯಯನದ ನೆಪದಲ್ಲಿ ಸಂಸ್ಥೆಯು ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ತಡೆಹಿಡಿಯುತ್ತಿತ್ತು.

ಕಾನೂನುಬಾಹಿರ ಚಟುವಟಿಕೆಯಿಂದ ಹಣ ಗಳಿಸಲು ಐಸೆಕ್ ಗೆ ಅವಕಾಶ ನೀಡುವ ಮೂಲಕ ಎನ್‌ಎಸ್‌ಇ ಗೆ ವಿತ್ತೀಯ ನಷ್ಟ ಉಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಎನ್‌ಎಸ್‌ಇ ಅಧಿಕಾರಿಗಳು ಮತ್ತು ಐಸೆಕ್ ನಡುವೆ ಒಪ್ಪಂದ ಅಂತಿಮಗೊಳಿಸಿದಾಗ, ಖಾಸಗಿ ಸಂಸ್ಥೆಯನ್ನು ಮಾಜಿ ಮುಂಬೈ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ಪ್ರತಿನಿಧಿಸಿದ್ದರು.

ಮಾಜಿ ಎನ್‌ಎಸ್‌ಇ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ರವಿ ನಾರಾಯಣ್ ಅವರು ಉದ್ಯೋಗಿಗಳು ಚರ್ಚೆ ನಡೆಸುತ್ತಿದ್ದಾರೆಯೇ ಅಥವಾ ವಿನಿಮಯ ಸಂಬಂಧಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆಯೇ ಎಂದು ಕಂಡುಹಿಡಿಯಲು ಬಯಸಿದ್ದರು ಎಂದು ಸಿಬಿಐ ಶಂಕಿಸಿದೆ.

ಇದನ್ನೂ ಓದಿ:ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

ಚಿತ್ರಾ ರಾಮಕೃಷ್ಣ ಅವರನ್ನು 2022ರ ಮಾರ್ಚ್ ನಲ್ಲಿ ಸಿಬಿಐ ಬಂಧಿಸಿತು. ನ್ಯಾಯಾಲಯವು ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೆಹಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಅವರು 2013 ಮತ್ತು 2016 ರ ನಡುವೆ ಎನ್ಎಸ್ಇ ನ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.