ಮಾನನಷ್ಟ ಮೊಕದ್ದಮೆ ಪ್ರಕರಣ: ಉದ್ಧವ್, ಆದಿತ್ಯ ಠಾಕ್ರೆ, ಸಂಜಯ್ ರಾವತ್ ಗೆ ಕೋರ್ಟ್ ಸಮನ್ಸ್
Team Udayavani, Mar 28, 2023, 7:35 PM IST
ಮುಂಬೈ : ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಂಗಳವಾರ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಕ್ಷದ ಶಾಸಕ ಆದಿತ್ಯ ಠಾಕ್ರೆ ಮತ್ತು ಸಂಸದ ಸಂಜಯ್ ರಾವತ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಶಿಂಧೆ ಬಣವು ಶಿವಸೇನೆ ಚಿಹ್ನೆಯನ್ನು 2,000 ಕೋಟಿ ರೂಪಾಯಿಗೆ ಖರೀದಿಸಿದೆ ಎಂಬ ಹೇಳಿಕೆ ನೀಡಿದ್ದ ಉದ್ಧವ್ , ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವುತ್ ವಿರುದ್ಧ ಶಿವಸೇನೆ ನಾಯಕ ರಾಹುಲ್ ಶೆವಾಲೆ ಅವರು ಮೊಕದ್ದಮೆ ಹೂಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಮೂವರಿಗೆ ಸಮನ್ಸ್ ಜಾರಿ ಮಾಡಿದೆ ಅಲ್ಲದೆ ಏಪ್ರಿಲ್ 17 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.
ಶಿವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಪೀಠ, ಸಂಜಯ್ ರಾವತ್, ಉದ್ಧವ್ ಮತ್ತು ಆದಿತ್ಯ ಠಾಕ್ರೆ ಅವರಿಗೆ ಸಮನ್ಸ್ ಜಾರಿಗೊಳಿಸಿ, ತನ್ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದೆ.
ಇದನ್ನೂ ಓದಿ: ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು