ಎಚ್ಐವಿ ಪೀಡಿತ ನಡೆಸುವ ಲೈಂಗಿಕ ಕ್ರಿಯೆಯನ್ನು”ಕೊಲೆ ಯತ್ನ’ ಎಂದು ಪರಿಗಣಿಸಲಾಗದು: ಕೋರ್ಟ್
Team Udayavani, Nov 30, 2020, 7:52 AM IST
ಹೊಸದಿಲ್ಲಿ: ಎಚ್ಐವಿ ಪಾಸಿವಿಟ್ ವ್ಯಕ್ತಿಯೊಬ್ಬ ಮಹಿಳೆಯ ಸಮ್ಮತಿಯೊಂದಿಗೆ ಲೈಂಗಿಕ ಕ್ರಿಯೆ(ಸಂಭೋಗ) ನಡೆಸಿದರೆ, ಅದನ್ನು “ಕೊಲೆ ಯತ್ನ’ ಎಂದು ಪರಿಗಣಿಸಿ ಆತನನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ.
ಮಲಮಗಳನ್ನೇ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಏಡ್ಸ್ ಪೀಡಿತ ವ್ಯಕ್ತಿಯೊಬ್ಬನನ್ನು ಸೆಕ್ಷನ್ 307 (ಕೊಲೆ ಯತ್ನ)ರ ಅನ್ವಯ ಅಪರಾಧಿ ಎಂದು ಘೋಷಿಸಿ ನೀಡಿದ ತೀರ್ಪನ್ನು ನ್ಯಾಯಾಲಯ ವಜಾ ಮಾಡಿದೆ. ಯಾವುದೇ ಮಹಿಳೆಯ ಒಪ್ಪಿಗೆ ಇದ್ದು, ಆಕೆಯೊಂದಿಗೆ ಎಚ್ಐವಿ ಪೀಡಿತ ವ್ಯಕ್ತಿ ಸಂಭೋಗ ನಡೆಸಿದರೆ ಆತ “ಕೊಲೆ ಯತ್ನ’ (ತನ್ನ ಸೋಂಕನ್ನು ಆಕೆಗೆ ಹರಡಿ ಆಕೆಯ ಸಾವಿಗೆ ಕಾರಣವಾಗುವ ಕೃತ್ಯ) ನಡೆಸಿದ್ದಾನೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾ| ವಿಭು ಬಖ್ರು ನೇತೃತ್ವದ ನ್ಯಾಯಪೀಠ ಹೇಳಿದೆ.
ಆದರೆ, ಈ ಪ್ರಕರಣದಲ್ಲಿ ವ್ಯಕ್ತಿಯು ತಮ್ಮ ಮಲಮಗಳ ಮೇಲೆಯೇ ಅತ್ಯಾಚಾರ ಮಾಡಿರುವ ಕಾರಣ, ಆತನನ್ನು ಸೆಕ್ಷನ್ 376(ಅತ್ಯಾಚಾರ)ರಡಿ ಅಪರಾಧಿ ಎಂದು ಘೋಷಿಸಿ, ನ್ಯಾಯಪೀಠ ಶಿಕ್ಷೆಯನ್ನು ಎತ್ತಿಹಿಡಿದಿದೆ.
“ಒಂದು ವೇಳೆ ಪಾಸಿಟಿವ್ ವ್ಯಕ್ತಿ ತನ್ನ ಸ್ಥಿತಿಯ ಅರಿವಿದ್ದೂ, ಅಸುರಕ್ಷಿತ ಲೈಂಗಿಕತೆಗೆ ಮುಂದಾದರೆ ಸೆಕ್ಷನ್ 270ರ ಅಡಿಯಲ್ಲಿ ಸೋಂಕನ್ನು ಉದ್ದೇಶಪೂರ್ವಕವಾಗಿ ಹರಡಲೆತ್ನಿಸಿದ ಆರೋಪ ದಡಿಯಲ್ಲಿ ಆತನನ್ನು ಶಿಕ್ಷೆಗೆ ಗುರಿಪಡಿಸಬಹುದು’ ಎಂದು ಈ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಅಭಿಪ್ರಾಯಪಟ್ಟಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ದೆಹಲಿ: ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; 200 ಮಂದಿ ದೆಹಲಿ ಪೊಲೀಸರ ವಶಕ್ಕೆ
ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’
MUST WATCH
ಹೊಸ ಸೇರ್ಪಡೆ
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ