ಅಬಕಾರಿ ನೀತಿ ಪ್ರಕರಣ: ಸಿಬಿಐನಿಂದ ಡಿಸಿಎಂ ಸಿಸೋಡಿಯಾ ಬ್ಯಾಂಕ್ ಲಾಕರ್ ತಪಾಸಣೆ
ಆಗಸ್ಟ್ 19ರಂದು ಸಿಬಿಐ ತಂಡ ಸಿಸೋಡಿಯಾ ನಿವಾಸ ಸೇರಿದಂತೆ 31 ಸ್ಥಳಗಳ ಮೇಲೆ ದಾಳಿ ನಡೆಸಿತ್ತು.
Team Udayavani, Aug 30, 2022, 12:46 PM IST
ನವದೆಹಲಿ: ವಿವಾದಿತ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ (ಆಗಸ್ಟ್ 30) ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಬ್ಯಾಂಕ್ ಲಾಕರ್ ಶೋಧ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ದೃಶ್ಯ ಮಾಧ್ಯಮದವರು ಏನಾಗಲಿದೆ ಎಂಬ ಕುತೂಹಲದಿಂದ ಭಾರೀ ಸಂಖ್ಯೆಯಲ್ಲಿ ಬ್ಯಾಂಕ್ ಹೊರಭಾಗದಲ್ಲಿ ಜಮಾಯಿಸಿದ್ದರಿಂದ ಅವ್ಯವಸ್ಥೆಗೆ ಎಡೆ ಮಾಡಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಮಾಜಿ ಸಿಎಂ ಕಲ್ಯಾಣ್ ಸಿಂಗ್ ವಿರುದ್ಧ ಕೇಸ್ ಕೈಬಿಟ್ಟ ಸುಪ್ರೀಂ
ಗಾಜಿಯಾಬಾದ್ ನ ಸೆಕ್ಟರ್ 4ರ ವಸುಂಧರಾದಲ್ಲಿರುವ ಪಿಎನ್ ಬಿ ಶಾಖೆಗೆ ಸಿಬಿಐನ ಐವರು ಅಧಿಕಾರಿಗಳ ತಂಡ ಭೇಟಿ ನೀಡಿ ಶೋಧ ಕಾರ್ಯ ನಡೆಸಿರುವುದಾಗಿ ವರದಿ ವಿವರಿಸಿದೆ. ಈ ಸಂದರ್ಭದಲ್ಲಿ ಸಿಸೋಡಿಯಾ ಮತ್ತು ಪತ್ನಿ ಹಾಜರಿದ್ದರು.
2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸೇರಿದಂತೆ ಆಮ್ ಆದ್ಮಿ ಪಕ್ಷದ 15 ಜನರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಸಿಬಿಐ ತನಿಖೆಗೆ ಸ್ವಾಗತ ಎಂದು ಸಿಸೋಡಿಯಾ ಸೋಮವಾರ ಟ್ವೀಟ್ ಮಾಡಿದ್ದರು.
ಆಗಸ್ಟ್ 19ರಂದು ನಮ್ಮ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ತಂಡ 14 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ್ದರೂ ಕೂಡಾ ಏನನ್ನೂ ಪತ್ತೆಹಚ್ಚಿಲ್ಲವಾಗಿತ್ತು. ಇದೀಗ ನನ್ನ ಬ್ಯಾಂಕ್ ಲಾಕರ್ ನಲ್ಲಿಯೂ ಏನೂ ದೊರೆಯಲಾರದು ಎಂದು ಸಿಸೋಡಿಯಾ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದರು.
ಸಿಬಿಐ ತನಿಖೆಗೆ ನನ್ನ ಕುಟುಂಬ ವರ್ಗ ಮತ್ತು ನಾನು ಸಂಪೂರ್ಣವಾಗಿ ಸಹಕಾರ ನೀಡುತ್ತೇವೆ ಎಂದು ಸಿಸೋಡಿಯಾ ತಿಳಿಸಿದ್ದರು. ಆಗಸ್ಟ್ 19ರಂದು ಸಿಬಿಐ ತಂಡ ಸಿಸೋಡಿಯಾ ನಿವಾಸ ಸೇರಿದಂತೆ 31 ಸ್ಥಳಗಳ ಮೇಲೆ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ