ದೆಹಲಿ ಮದ್ಯ ನೀತಿ ಪ್ರಕರಣ: ಫಾರ್ಮಾ ಕಂಪನಿಯ ಮುಖ್ಯಸ್ಥ ಶರತ್ ರೆಡ್ಡಿ ಸೇರಿ ಇಬ್ಬರ ಬಂಧನ
Team Udayavani, Nov 10, 2022, 10:16 AM IST
ನವದೆಹಲಿ: ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2 ಜನರನ್ನು ಬಂಧಿಸಿದೆ. ಬಂಧಿತ ಆರೋಪಿಗಳ ಹೆಸರು ಶರತ್ ರೆಡ್ಡಿ ಮತ್ತು ವಿನಯ್ ಬಾಬು ಅವರು ತೆಲಂಗಾಣ ಮತ್ತು ಆಂಧ್ರಪ್ರದೇಶದ ಉದ್ಯಮಿಗಳಾಗಿದ್ದು, ಫಾರ್ಮಾ ಕಂಪನಿಯ ಮಾಲೀಕರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 5 ಮಂದಿಯನ್ನು ಬಂಧಿಸಲಾಗಿದೆ. ವಾಸ್ತವವಾಗಿ ಇಡಿ ಒಟ್ಟು 3 ಜನರನ್ನು ಬಂಧಿಸಿದ್ದರೆ ಸಿಬಿಐ ಇಬ್ಬರನ್ನು ಬಂಧಿಸಿದೆ. ಈ ವೇಳೆ ಆರೋಪಿ ದಿನೇಶ್ ಅರೋರಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸರ್ಕಾರಿ ಸಾಕ್ಷಿಯಾಗುವಂತೆ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆಯು ಅರಬಿಂದೋ ಫಾರ್ಮಾದ ವ್ಯವಸ್ಥಾಪಕ ನಿರ್ದೇಶಕ ಶರತ್ ರೆಡ್ಡಿ ಅವರ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಶೋಧಿಸಿ, ವಿಚಾರಣೆ ನಡೆಸಿತ್ತು, ಈ ವೇಳೆ ಅವರು ಅಕ್ರಮ ಆದಾಯ ವರ್ಗಾಯಿಸಲು ಸಹಾಯ ಮಾಡಿದ್ದರು ಎಂಬುದು ತಿಳಿದು ಬಂದಿದೆ ಈ ವಿಚಾರವಾಗಿ ಅಧಿಕಾರಿಗಳು ಶರತ್ ರೆಡ್ಡಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ :ಫಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಣೆ, ಸಮರ್ಪಕ ನಿರ್ವಹಣೆ: ವೀಣಾ ವಿವೇಕಾನಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್