ದಿಲ್ಲಿ: ಪತ್ನಿಯ ಕೊಂದು ಶಿರಚ್ಛೇದ ಮಾಡಿ ಹಾಸಿಗೆಯಡಿ ಅಡಗಿಸಿಟ್ಟ ಪತಿ 


Team Udayavani, Feb 15, 2017, 11:05 AM IST

Murder-700.jpg

ಹೊಸದಿಲ್ಲಿ : 40ರ ಹರೆಯದ ವ್ಯಕ್ತಿಯೋರ್ವ ತನ್ನ ಮೊದಲ ಪತ್ನಿಯನ್ನು ಹೊಡೆದು ಕೊಂದು, ಆಕೆಯ ದೇಹವನ್ನು ಎರಡು ಭಾಗ ಮಾಡಿ ಶವದ ವಿಲೇವಾರಿ ಮಾಡಲು ಯತ್ನಿಸಿ ಪೊಲೀಸರಿಂದ ಬಂಧಿತನಾದ ಅತ್ಯಂತ ಅಮಾನುಷ ಹಾಗೂ ಆಘಾತಕಾರಿ ಘಟನೆ ವ್ಯಾಲೆಂಟೈನ್‌ ದಿನದಂದು ಬೆಳಕಿಗೆ ಬಂದಿದೆ.

ಮೊದಲ ಪತ್ನಿ 35ರ ಹರೆಯದ ಮನೀಷಾಳನ್ನು ಹೊಡೆದು ಕೊಂದು  ಶಿರಚ್ಛೇದ ಗೈದ ವ್ಯಕ್ತಿಯನ್ನು ಸುಬೋಧ್‌ ಎಂದ ಗುರುತಿಸಲಾಗಿದೆ. ಮನೀಷಾಗೆ ಅನೈತಿಕ ಸಂಬಂಧ ಇದೆ ಎಂಬ ಗುಮಾನಿಯಲ್ಲಿ ಆಕೆಯನ್ನು ಆತ ಫೆ.10 ಮತ್ತು 11ರ ನಡುವಿನ ರಾತ್ರಿಯಲ್ಲಿ ಹೊಡೆದು ಕೊಂದಿದ್ದಾನೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸುಬೋಧ್‌ ನಿಂದ ಮೊದಲ ಪತ್ನಿ ಮನೀಷಾಗೆ ಇಬ್ಬರು ಮಕ್ಕಳಿದ್ದಾರೆ. ಈಕೆ ತನ್ನಿಬ್ಬರು ಮಕ್ಕಳೊಂದಿಗೆ ಶಾಕೂರ್‌ಪುರದಲ್ಲಿ ವಾಸವಾಗಿದ್ದಾಳೆ. ಸುಬೋಧ್‌ ತನ್ನ ಎರಡನೇ ಪತ್ನಿ ಮುನಿಯಾ ಹಾಗೂ ಎರಡು ತಿಂಗಳ ಮಗುವಿನ ಜತೆಗೆ ಮಧು ವಿಹಾರದಲ್ಲಿ ವಾಸವಾಗಿದ್ದಾನೆ.

ಫೆ.10-11ರ ರಾತ್ರಿ ಸುಬೋಧ್‌ ತನ್ನ ಮೊದಲ ಪತ್ನಿ ಮನೀಷಾಳನ್ನು ಮಧು ವಿಹಾರದಲ್ಲಿನ ತನ್ನ ಮನೆಗೆ, ಮಾತನಾಡಲು ಬರುವಂತೆ, ಕರೆಸಿಕೊಂಡಿದ್ದಾನೆ. ಆಕೆಯೊಂದಿಗೆ ಆಕೆಯ ಇಬ್ಬರು ಮಕ್ಕಳು ಕೂಡ ಬಂದಿದ್ದಾರೆ. 

ಮೈಮೇಲೆ ಆವೇಶ ಬಂದವನಂತೆ ಪತಿ ಸುಬೋಧ್‌ ಪತ್ನಿ ಮನೀಷಾಳ ಮೇಲೆ ನಿರ್ದಯವಾಗಿ ದೊಣ್ಣೆಯಿಂದ ಹೊಡೆಯಲು ಮುಂದಾಗಿದ್ದಾನೆ. ಎರಡನೇ ಪತ್ನಿ ಮುನಿಯಾ, ಮತ್ತು ತನ್ನ ಇಬ್ಬರು ಮಕ್ಕಳು ಎಷ್ಟೇ ಅಂಗಲಾಚಿ ಬೇಡಿಕೊಂಡರೂ ಸುಬೋಧ್‌, ಮೊದಲ ಪತ್ನಿ ಮನೀಷಾಳ ಮೇಲೆ ಹಲ್ಲೆ ಮಾಡುವುದನ್ನು ನಿಲ್ಲಿಸಲಿಲ್ಲ.

ಮಾರಣಾಂತಿಕ ಗಾಯಗಳಿಗೆ ಗುರಿಯಾದ ಮನೀಷಾ ಕೊನೆಗೂ ಸಾವಪ್ಪಿದ್ದಾಳೆ. ಆಗ ಆಕೆಯ ಶವದ ಶಿರಚ್ಛೇದ ಮಾಡಿ, ದೇಹವನ್ನು ತುಂಡರಿಸಿ, ಬ್ಯಾಗ್‌ನೊಳಗೆ ತುರುಕಿ ಅದನ್ನು ಬಾಕ್ಸ್‌-ಬೆಡ್‌ನ‌ ಒಳಗಡೆ ಇರಿಸಿದ್ದಾನೆ. 

ಮರುದಿನ ಸುಬೋಧ್‌ನ ಮನೆಯಿಂದ ಶವದ ದುರ್ನಾತ ಹೊರ ಬರಲು ಆರಂಭಿಸಿದಾಗ ಶಂಕೆಪಟ್ಟ ನೆರೆಕರೆಯವರು ಒಡನೆಯೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಧಾವಿಸಿ ಬಂದ ಪೊಲೀಸರು ಶವವನ್ನು ತುಂಡರಿಸಿ ಅಡಗಿಸಿಡಲಾಗಿದ್ದ  ಪೆಟ್ಟಿಗೆಯನ್ನು ಪತ್ತೆ ಹಚ್ಚಿ ಸುಬೋಧ್‌ನನ್ನು ಬಂಧಿಸಿದ್ದಾರೆ. 

ಪೊಲೀಸರು ಈ ಅತ್ಯಮಾನುಷ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.