ವಿವಾಹ ಪ್ರಸ್ತಾಪಕ್ಕೆ ನಕಾರ: ಪ್ರಿಯತಮೆ ತಂದೆಯನ್ನು ಹತ್ಯೆಗೈದ ಪ್ರಿಯಕರ!
ಏತನ್ಮಧ್ಯೆ ತಂದೆ ಸಿಂಗ್ ಸೂರಜ್ ಜತೆಗಿನ ಸಂಬಂಧವನ್ನು ಬಲವಾಗಿ ವಿರೋಧಿಸಿದ್ದರು.
Team Udayavani, Dec 8, 2020, 3:41 PM IST
Representative Image
ನವದೆಹಲಿ:ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ಆಕ್ರೋಶಗೊಂಡ ಯುವಕ ಪ್ರಿಯತಮೆಯ ತಂದೆಯನ್ನು ಹತ್ಯೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋನಿಯಾ ವಿಹಾರ್ ನಿವಾಸಿಯಾಗಿರುವ ಆರೋಪಿ ಸೂರಜ್ ಕುಮಾರ್, ಪಾಲಂ ಮೆಟ್ರೋ ನಿಲ್ದಾಣದಲ್ಲಿ ಮನೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಆಡಿಟೋರಿಯಂ ಸಮೀಪ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಶನಿವಾರ(ಡಿಸೆಂಬರ್ 05, 2020) 50 ವರ್ಷ ಬಿಜೇಂದ್ರ ಸಿಂಗ್ ಮನೆಯಲ್ಲಿ ಹತ್ಯೆಗೀಡಾಗಿದ್ದರು. ಸಿಂಗ್ ಅವರ ತಲೆಯಲ್ಲಿ ಹಲವಾರು ಗಾಯಗಳಾಗಿದ್ದವು ಎಂದು ಸೋನಿಯಾ ವಿಹಾರ್ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆದರೆ ಮನೆಯೊಳಗೆ ಯಾರೂ ಬಲವಂತವಾಗಿ ಪ್ರವೇಶಿಸಿಲ್ಲ ಎಂಬುದು ಕೂಡಾ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬಿಜೇಂದ್ರ ಸಿಂಗ್ ಅವರ ದತ್ತು ಪುತ್ರಿ ಸೂರಜ್ ಎಂಬಾತನನ್ನು ಪ್ರೀತಿಸುತ್ತಿದ್ದಳು.
ಇದನ್ನೂ ಓದಿ:ತಾರಾಲಯ ಕಾಮಗಾರಿಗೆ ಹಿಡಿದಿದೆ ಗ್ರಹಣ! ಅನೈತಿಕ ಚಟುವಟಿಕೆ ತಾಣವಾಗಿದೆ ಜ್ಞಾನಾರ್ಜನೆ ಕಟ್ಟಡ
ಏತನ್ಮಧ್ಯೆ ತಂದೆ ಸಿಂಗ್ ಸೂರಜ್ ಜತೆಗಿನ ಸಂಬಂಧವನ್ನು ಬಲವಾಗಿ ವಿರೋಧಿಸಿದ್ದರು. ಸೂರಜ್ ಪೋಷಕರು ವಿವಾಹ ಪ್ರಸ್ತಾಪ ಮುಂದಿಟ್ಟಿದ್ದರು. ಆದರೆ ಬಿಜೇಂದ್ರ ಸಿಂಗ್ ವಿವಾಹ ಸಾಧ್ಯವಿಲ್ಲ ಎಂದು ಹೇಳಿಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಮಗಳನ್ನು ವಿವಾಹ ಮಾಡಿಕೊಡುವುದಿಲ್ಲ ಎಂದು ಹೇಳಿದ್ದ ಸಿಂಗ್ ಅನ್ನು ಕೊಲೆ ಮಾಡುವ ಸಂಚು ರೂಪಿಸಿರುವುದಾಗಿ ವಿಚಾರಣೆ ವೇಳೆ ಸೂರಜ್ ತಿಳಿಸಿದ್ದ. ಕೆಲವು ದಿನಗಳ ಕಾಲ ಸಿಂಗ್ ಹಾಗೂ ಅವರ ಪತ್ನಿಯ ಚಲನವಲನ ಗಮನಿಸಿರುವುದಾಗಿ ವಿವರಿಸಿದ್ದಾನೆ.
ನವೆಂಬರ್ 28ರಂದು ಆರೋಪಿ ಚೂರಿಯಿಂದ ಸಿಂಗ್ ಗೆ ಇರಿದಿದ್ದ, ನಂತರ ಪ್ರೆಶರ್ ಕುಕ್ಕರ್ ನಿಂದ ಹಲವಾರು ಬಾರಿ ತಲೆಗೆ ಹೊಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್