ಜಗಳ ತಡೆಯಲು ಮಧ್ಯಪ್ರವೇಶಿಸಿದ ವ್ಯಕ್ತಿಗೆ 22 ಬಾರಿ ಚೂರಿಯಿಂದ ಇರಿದು ಹತ್ಯೆ!
ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ಹೋಗಿರುವುದಾಗಿ ವರದಿ ವಿವರಿಸಿದೆ.
Team Udayavani, Dec 12, 2020, 3:12 PM IST
Representative Image
ನವದೆಹಲಿ: ಎರಡು ಗುಂಪುಗಳ ಮಧ್ಯೆ ಜಗಳ ನಡೆಯುತ್ತಿದ್ದಾಗ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ವ್ಯಕ್ತಿಗೆ 22 ಬಾರಿ ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ದೆಹಲಿಯಲ್ಲಿ ಶುಕ್ರವಾರ(ಡಿಸೆಂಬರ್ 12, 2020) ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಾವಿಗೀಡಾದ ವ್ಯಕ್ತಿಯನ್ನು ನೀರಜ್ ಎಂದು ಗುರುತಿಸಲಾಗಿದ್ದು, ಆತನ ಇಬ್ಬರು ಗೆಳೆಯರು ಮುಖೇಶ್ ಮತ್ತು ರಾಕೇಶ್ ಎಂದು ವರದಿ ತಿಳಿಸಿದೆ. ಇಬ್ಬರು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪೊಲೀಸರ ವರದಿ ಪ್ರಕಾರ, ಕೃಷ್ಣ ಮತ್ತು ರವಿ ಎಂಬಿಬ್ಬರು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರಿಬ್ಬರನ್ನು ಕೆಲಸದಿಂದ ವಜಾ ಮಾಡಿ, ಮುಕೇಶ್ ಮತ್ತು ರಾಕೇಶ್ ನನ್ನು ಸೆಕ್ಯುರಿಟಿ ಕೆಲಸಕ್ಕೆ ನಿಯೋಜಿಸಿದ್ದರಿಂದ ವೈಮನಸ್ಸು ಬೆಳೆದಿತ್ತು. ಈ ಹಿನ್ನೆಲೆಯಲ್ಲಿ ಮುಕೇಶ್ ಮತ್ತು ರಾಕೇಶ್ ಮೇಲೆ ಹಲ್ಲೆ ನಡೆಸಲು ಇಬ್ಬರು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದವರು ಅಪಾಯದಿಂದ ಪಾರು
ಬುಧವಾರ ರಾತ್ರಿ ಸೆಕ್ಯುರಿಟಿ ಪಾಳಿ ಮುಗಿಸಿ ಮುಕೇಶ್ ಮತ್ತು ರಾಕೇಶ್ ಆಸ್ಪತ್ರೆಯಿಂದ ಹೊರಡುವಾಗ ತಮ್ಮ ಗೆಳೆಯ ನೀರಜ್ ಜತೆಗೂಡಿ ಹೊರಟಿದ್ದರು. ದಾರಿಯಲ್ಲಿ ಹೋಗುತ್ತಿದ್ದ ಇಬ್ಬರನ್ನು ಕೃಷ್ಣ ಮತ್ತು ರವಿ ತಡೆದು ನಿಲ್ಲಿಸಿದ್ದರು. ಈ ಸಂದರ್ಭ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ಹೋಗಿರುವುದಾಗಿ ವರದಿ ವಿವರಿಸಿದೆ.
ಕೃಷ್ಣ ಮತ್ತು ರವಿ ಏಕಾಏಕಿ ಮುಕೇಶ್ ಹಾಗೂ ರಾಕೇಶ್ ಮೇಲೆ ಹಲ್ಲೆ ನಡೆಸಿದಾಗ ನೀರಜ್ ಮಧ್ಯಪ್ರವೇಶಿಸಿ ಜಗಳ ತಡೆಯಲು ಪ್ರಯತ್ನಿಸುತ್ತಿರುವಾಗಲೇ 22 ಬಾರಿ ಚೂರಿಯಿಂದ ಇರಿದಿರುವ ಘಟನೆ ನಡೆದಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ರಕ್ತಸ್ರಾವದಿಂದ ನೀರಜ್ ಸಾವನ್ನಪ್ಪಿರುವುದಾಗಿ ತಿಳಿಸಿರುವ ಡೆಪ್ಯುಟಿ ಕಮಿಷನರ್ ಪ್ರತಾಪ್ ಸಿಂಗ್, ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ