
ವಿಶ್ವದ ಅತಿದೊಡ್ಡ, ಅತ್ಯಂತ ನಕಾರಾತ್ಮಕ ಪಕ್ಷವನ್ನು ಸೋಲಿಸಲಾಗಿದೆ ಎಂದ ಆಪ್
ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಅಗತ್ಯವಿದೆ ಎಂದ ಕೇಜ್ರಿವಾಲ್
Team Udayavani, Dec 7, 2022, 5:11 PM IST

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ತಮ್ಮ ಪಕ್ಷಕ್ಕೆ ನಾಗರಿಕ ಸಂಸ್ಥೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಈಗ ಕೇಂದ್ರದ ಸಹಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಅಗತ್ಯವಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.
ಈಗ ದೆಹಲಿಯಲ್ಲಿ ಕೆಲಸ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ನ ಸಹಕಾರವನ್ನು ನಾನು ಬಯಸುತ್ತೇನೆ. ನಾನು ಕೇಂದ್ರಕ್ಕೆ ಮನವಿ ಮಾಡುತ್ತೇನೆ ಮತ್ತು ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದವನ್ನು ಕೇಳುತ್ತೇನೆ. ಎಂಸಿಡಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂದು ಇಂದು ದೆಹಲಿಯ ಜನರು ಇಡೀ ದೇಶಕ್ಕೆ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ತಮ್ಮ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ದೆಹಲಿಯ ಜನತೆಗೆ ಎಎಪಿಯ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ಬುಧವಾರ ಧನ್ಯವಾದ ಅರ್ಪಿಸಿ “ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ನಕಾರಾತ್ಮಕ ಪಕ್ಷ” ವನ್ನು ಸೋಲಿಸಲು ಅವರ ಜನಾದೇಶ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ನಂಬಿದ್ದಕ್ಕಾಗಿ ದೆಹಲಿಯ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು.ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ನಕಾರಾತ್ಮಕ ಪಕ್ಷವನ್ನು ಸೋಲಿಸುವ ಮೂಲಕ ದೆಹಲಿಯ ಜನರು ನಿಷ್ಠಾವಂತ, ಪ್ರಾಮಾಣಿಕ ಮತ್ತು ದುಡಿಯುವ ಜನರನ್ನು ಆಯ್ಕೆ ಮಾಡಿದ್ದಾರೆ.ಅರವಿಂದ್ ಕೇಜ್ರಿವಾಲ್ ಜಿ ಗೆಲ್ಲುವಂತೆ ಮಾಡಲಾಗಿದೆ. ನಮಗೆ ಇದು ಗೆಲುವು ಮಾತ್ರವಲ್ಲ ದೊಡ್ಡ ಜವಾಬ್ದಾರಿ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಕ್ರಿಯಿಸಿ, ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಮತ್ತು ಈಗ ಮಹಾನಗರ ಪಾಲಿಕೆಯಲ್ಲಿ 15 ವರ್ಷಗಳ ಬಿಜೆಪಿ ಆಡಳಿತವನ್ನು ಬೇರುಸಹಿತ ಕಿತ್ತೊಗೆದಿದ್ದಾರೆ. ಇದು ದೆಹಲಿಯ ಜನರು ದ್ವೇಷದ ರಾಜಕಾರಣವನ್ನು ಇಷ್ಟಪಡುವುದಿಲ್ಲ ಎಂದು ತೋರಿಸುತ್ತದೆ, ಅವರು ಶಾಲೆಗಳು, ಆಸ್ಪತ್ರೆಗಳು, ವಿದ್ಯುತ್, ಸ್ವಚ್ಛತೆ ಮತ್ತು ಮೂಲಸೌಕರ್ಯಕ್ಕಾಗಿ ಮತ ಚಲಾಯಿಸುತ್ತಾರೆ ಎಂದಿದ್ದಾರೆ.
ದೆಹಲಿ ಜನತೆಯಿಂದ ಬಿಜೆಪಿಗೆ ತಕ್ಕ ಉತ್ತರ ಸಿಕ್ಕಿದೆ. ಅಭಿವೃದ್ಧಿ ಕೆಲಸ ಮಾಡುವವರಿಗೆ ಜನ ಮತ ಹಾಕಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೇಲೆ ಬಿಜೆಪಿ ಎಸೆಯಲು ಯತ್ನಿಸಿದ ಕೆಸರನ್ನು ಇಂದು ದೆಹಲಿ ಅಳಿಸಿ ಹಾಕಿದೆ ಎಂದು ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಆಮ್ ಆದ್ಮಿ ಪಕ್ಷ ಬಹುಮತದ 126 ರ ಗಡಿಯನ್ನು ದಾಟಿ 134 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 104 ರಲ್ಲಿ ಗೆದ್ದಿದೆ.ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದು ಭಾರಿ ಆಘಾತ ಅನುಭವಿಸಿದೆ. ಈಶಾನ್ಯ ದೆಹಲಿಯ ಸೀಲಂಪುರದಿಂದ ಶಕೀಲಾ ಬೇಗಂ ಸೇರಿದಂತೆ ಮೂವರು ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪಲು ಈ ಬಜೆಟ್ ಸಹಕಾರಿ: ರಾಜನಾಥ್ ಸಿಂಗ್

Union Budget 2023: ಪೊಲ್ಯೂಟಿಂಗ್ ಪದದ ಬದಲು ಓಲ್ಡ್ ಪಾಲಿಟಿಕಲ್ ಎಂದ ಸಚಿವೆ ನಿರ್ಮಲಾ: ಸದನದಲ್ಲಿ ನಗೆಯ ಅಲೆ!
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್