ಕೋವಿಡ್ 19 ಮುಂಜಾಗ್ರತಾ ಕ್ರಮ; 169 ದಿನಗಳ ಬಳಿಕ ದೆಹಲಿ, ಚೆನ್ನೈ ಮೆಟ್ರೋ ಆರಂಭ
ಟೋಕನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಮಾರ್ಗಸೂಚಿ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗಿದೆ
Team Udayavani, Sep 7, 2020, 11:35 AM IST
ಬೆಂಗಳೂರು/ನವದೆಹಲಿ:ಬರೋಬ್ಬರಿ ಐದು ತಿಂಗಳ ನಂತರ ಬೆಂಗಳೂರು, ದೆಹಲಿಯಲ್ಲಿ ಮೆಟ್ರೋ ರೈಲು ಸಂಚಾರ ಸೋಮವಾರ (ಸೆಪ್ಟೆಂಬರ್ 07, 2020)ದಿಂದ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಆರಂಭವಾಗಿದೆ.
ಯಾವುದೇ ರೋಗ ಲಕ್ಷಣ ಇಲ್ಲದ ಪ್ರಯಾಣಿಕರನ್ನು ಮಾತ್ರ ಮೆಟ್ರೋದೊಳಕ್ಕೆ ಬಿಡಲಾಗುತ್ತದೆ. ಅಲ್ಲದೇ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ವರದಿ ತಿಳಿಸಿದೆ. ಪ್ರಯಾಣಿಕರು ಆರೋಗ್ಯ ಸೇತು ಆ್ಯಪ್ ಅನ್ನು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಅಲ್ಲದೇ ಮೆಟ್ರೋ ನಿಲ್ದಾಣದಲ್ಲಿ ಥರ್ಮಲ್ (ಉಷ್ಣಾಂಶ) ಪರೀಕ್ಷೆ ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ದೆಹಲಿ, ನೋಯ್ಡಾ, ಚೆನ್ನೈ, ಕೊಚ್ಚಿ, ಬೆಂಗಳೂರು, ಮುಂಬೈ ಲೈನ್ 1, ಜೈಪುರ್, ಹೈದರಾಬಾದ್, ಮಹಾ ಮೆಟ್ರೋ(ನಾಗ್ಪುರ್), ಕೋಲ್ಕತಾ, ಗುಜರಾತ್ ಮತ್ತು ಉತ್ತರಪ್ರದೇಶ ಮೆಟ್ರೋ ಅಧಿಕಾರಿಗಳು ಮೆಟ್ರೋ ಸಂಚಾರಕ್ಕೆ ಸಿದ್ಧತೆ ನಡೆಸಿದ್ದರು. ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ನಗದು ವ್ಯವಹಾರ ಮತ್ತು ಟೋಕನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಮಾರ್ಗಸೂಚಿ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣದಲ್ಲಿ ಹೆಚ್ಚು ಜನ ಸಂದಣಿಯಾಗದಂತೆ ಹೆಚ್ಚು ಮೆಟ್ರೋ ರೈಲು ಸಂಚಾರ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಮೆಟ್ರೋ ತುಂಬಾ ಬೃಹತ್ ನೆಟ್ ವರ್ಕ್ ಹೊಂದಿದ್ದು, ಇದೀಗ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಿಸಿದೆ. ಉತ್ತರ ದೆಹಲಿಯ ಸಮಯ್ ಪುರ್ ಬಾಡ್ಲಿ ಯಿಂದ ಹರ್ಯಾಣ ಗುರುಗ್ರಾಮದ ಹೂಡಾ ಸಿಟಿವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ. ಮುಂದಿನ ಐದು ದಿನಗಳ ಬಳಿಕ ಇನ್ನುಳಿದ ಮಾರ್ಗಗಳಲ್ಲಿಯೂ ಮೆಟ್ರೊ ಸಂಚಾರ ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !