ದಿಲ್ಲಿ ನೋ ಫ್ಲೈ ಝೋನ್ : ಮೋದಿ ಕಾರ್ಯಕ್ರಮಕ್ಕೆ ಬರಲಾಗದ ಕೆಸಿಆರ್, ಜಗನ್
Team Udayavani, May 30, 2019, 3:41 PM IST
ಹೊಸದಿಲ್ಲಿ : ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರಿಗೆ ತಾಂತ್ರಿಕ ಕಾರಣಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಸಾಧ್ಯವಾಗಿದೆ.
ರಾಷ್ಟ್ರ ರಾಜಧಾನಿ ದಿಲ್ಲಿ ಸುತ್ತಮುತ್ತಲಿನ ವಾಯು ಪ್ರದೇಶವನ್ನು ಇಂದು ಗುರುವಾರ ಸಂಜೆ 4 ಗಂಟೆಯಿಂದಲೇ ಹಾರಾಟ ನಿಷಿದ್ಧ ಪ್ರದೇಶವನ್ನಾಗಿ ಘೋಷಿಸಲಾಗಿದೆ.
ರೆಡ್ಡಿ ಮತ್ತು ರಾವ್ ಅವರಿಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಜಯವಾಡದಿಂದ ದಿಲ್ಲಿಗೆ ಹೊರಡುವವರಿದ್ದರು. ಆದರೆ ದಿಲ್ಲಿ ನೋ ಫ್ಲೈ ಝೋನ್ ಆಗಿರುವುದರಿಂದ ಕೆಸಿಆರ್ ಇದೀಗ ಹೈದರಾಬಾದ್ ಗೆ ಮರಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸುಮಾರು 8,000 ಅತಿಥಿಗಳು ಭಾಗವಹಿಸುತ್ತಿದ್ದು ಇವರಲ್ಲಿ ವಿದೇಶೀ ಗಣ್ಯರು, ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರು ಗಣನೀಯ ಸಂಖ್ಯೆಯಲ್ಲಿದ್ದಾರೆ.
ಹಾಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ಭದ್ರತೆಯನ್ನು ಕಾಪಿಡುವ ಸಲುವಾಗಿ ದಿಲ್ಲಿ ಮತ್ತು ಸುತ್ತಮುತ್ತಲ ವಾಯು
ಪ್ರದೇಶವನ್ನು ಹಾರಾಟ ನಿಷಿದ್ಧ ಪ್ರದೇಶವನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್