ರೋಹಿತ್‌ ಶೇಖರ್‌ ಸಾವು ಪ್ರಕರಣ: ಪತ್ನಿ ಅಪೂರ್ವ ಬಂಧನ


Team Udayavani, Apr 24, 2019, 11:51 AM IST

Arrest

ನವದೆಹಲಿ: ಉತ್ತರಪ್ರದೇಶ ಮತ್ತು ಉತ್ತರಾಖಂಡ್‌ ಮಾಜೀ ಮುಖ್ಯಮಂತ್ರಿ ದಿವಂಗತ ಎನ್‌.ಡಿ. ತಿವಾರಿಯವರ ಪುತ್ರ ರೋಹಿತ್‌ ಶೇಖರ್‌ ತಿವಾರಿ ಅವರ ಶಂಕಾಸ್ಪದ ಸಾವಿನ ಪ್ರಕರಣವನ್ನು ಬೆಧಿಸುವಲ್ಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಪತಿಯ ಸಾವಿನಲ್ಲಿ ತಿವಾರಿ ಅವರ ವಕೀಲೆ ಪತ್ನಿ ಅಪೂರ್ವ ಅವರ ಕೈವಾಡ ಇರುವ ಶಂಕೆಯ ಆಧಾರದಲ್ಲಿ ಪೊಲೀಸರು ಇಂದು ಆಕೆಯನ್ನು ಬಂಧಿಸಿದ್ದಾರೆ.

ಎಪ್ರಿಲ್‌ 16ರಂದು ರೋಹಿತ್‌ ಶೇಖರ್‌ ಅವರನ್ನು ರಾಷ್ಟ್ರ ರಾಜಧಾನಿಯ ಸಾಕೇತ್‌ ನಲ್ಲಿರುವ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುಂಚೆಯೇ ಸಾವನ್ನಪ್ಪಿದ್ದರು. ಆ ಬಳಿಕ ಏಮ್ಸ್‌ ಆಸ್ಪತ್ರೆಯ ಐದು ಹಿರಿಯ ವೈದ್ಯರನ್ನು ಒಳಗೊಂಡಿದ್ದ ವೈದ್ಯಕೀಯ ಮಂಡಳಿಯು ವಿಸ್ತೃತ ಮರಣೊತ್ತರ ಪರೀಕ್ಷೆಯನ್ನು ನಡೆಸಿ ಅಟಾಪ್ಸಿ ವರದಿಯನ್ನು ಸಲ್ಲಿಸಿತ್ತು.

ಉಸಿರುಕಟ್ಟಿದ ಸ್ಥಿತಿಯಲ್ಲಿ ದೇಹಕ್ಕೆ ಆಮ್ಲಜನಕ ಪೂರೈಕೆ ಕೊರತೆಯಿಂದ ರೋಹಿತ್‌ ಶೇಖರ್‌ ಅವರ ಸಾವಾಗಿದೆ ಎಂದು ಹಿರಿಯ ವೈದ್ಯರ ತಂಡ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿತ್ತು. ಮತ್ತು ರೋಹಿತ್‌ ಅವರನ್ನು ತಲೆದಿಂಬಿನ ಮೂಲಕ ಉಸಿರುಕಟ್ಟಿಸಿರುವ ಸಾಧ್ಯತೆಗಳಿವೆ ಎಂದೂ ವೈದ್ಯರು ಅಭಿಪ್ರಾಯಪಟ್ಟಿದ್ದರು.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಕ್ರೈ ಬ್ರ್ಯಾಂಚ್‌ ಅಧಿಕಾರಿಗಳು ರೋಹಿತ್‌ ಸಾವಿಗೆ ಸಂಬಂಧಿಸಿದಂತೆ ಅವರ ಪತ್ನಿ ಹಾಗೂ ಇಬ್ಬರು ಮನೆ ಕೆಲಸದವರನ್ನು ವಿಚಾರಣೆಗೊಳಪಡಿಸಿದ್ದರು. ರೋಹಿತ್‌ ಪತ್ನಿ ಅಪೂರ್ವ ಅವರನ್ನು ಸತತ ಮೂರು ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಡಿಸಲಾಗಿತ್ತು. ಇನ್ನು ರೋಹಿತ್‌ ಶೇಖರ್‌ ಅವರ ಮನೆಯ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಸಹ ತನಿಖಾಧಿಕಾರಿಗಳು ಪರಿಶೀಲನೆಗೊಳಪಡಿಸಿದ್ದರು.

ಇನ್ನು ರೋಹಿತ್‌ ಅವರು ಸಾವನ್ನಪ್ಪಿದ ನಾಲ್ಕು ದಿನಗಳ ಬಳಿಕ ರೋಹಿತ್‌ ಅವರ ತಾಯಿ ಉಜ್ವಲಾ ತಿವಾರಿ ಅವರು ತನ್ನ ಮಗ ಹಾಗೂ ಸೊಸೆಯ ನಡುವೆ ಸಂಬಂಧ ಉತ್ತಮವಾಗಿರಲಿಲ್ಲ ಎಂದು ಮಾಧ್ಯಮದ ಮೂಲಕ ಹೇಳಿಕೊಂಡಿದ್ದರು. ಅವರಿಬ್ಬರದ್ದೂ ಪ್ರೇಮ ವಿವಾಹವಾಗಿದ್ದರೂ ಮೊದಲಿನಿಂದಲೂ ಅವರಿಬ್ಬರ ನಡುವೆ ಸಂಬಂಧ ಚೆನ್ನಾಗಿರಲಿಲ್ಲ ಎಂದು ಆಕೆಯ ಹೇಳಿಕೆಯಾಗಿತ್ತು. ತನ್ನಿಬ್ಬರೂ ಮಕ್ಕಳ ಆಸ್ತಿಯನ್ನು ಕಬಳಿಸಲು ಅಪೂರ್ವ ಅವರ ಕುಟುಂಬ ಸಂಚು ರೂಪಿಸಿತ್ತು ಎಂದೂ ಉಜ್ವಲಾ ಅವರು ಅರೋಪ ಮಾಡಿದ್ದರು. ಅಪೂರ್ವ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಪ್ರಾಕ್ಟೀಸ್‌ ಮಾಡುತ್ತಿದ್ದಾರೆ.

ರೋಹಿತ್‌ ಅವರು ಎಪ್ರಿಲ್‌ 12ರಂದು ಉತ್ತರಾಖಂಡ್‌ ಗೆ ಹೋಗಿದ್ದರು ಮತ್ತು 15ನೇ ತಾರೀಖೀನಂದು ವಾಪಾಸಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅವರು ತೂರಾಡುತ್ತಿರುವ ಸ್ಥಿತಿಯಲ್ಲಿ ಗೋಡೆಯನ್ನು ಆಧರಿಸಿ ನಡೆಯುತ್ತಿರುವುದು ದಾಖಲಾಗಿದೆ. ಇನ್ನು ರೋಹಿತ್‌ ಅವರು ಉಸಿರುಕಟ್ಟಿಕೊಂಡ ಸ್ಥಿತಿಯಲ್ಲಿದ್ದಾಗ ಮನೆಯೊಳಗೆ ಯಾರೂ ಹೋಗಿರುವುದು ಅಥವಾ ಹೊರ ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿಲ್ಲ ಎಂಬೆಲ್ಲಾ ವಿಚಾರಗಳನ್ನು ಗಮನಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.