ನಕಲಿ ಕಂಪನಿ ಮೂಲಕ ಆಮ್ ಆದ್ಮಿ ಪಕ್ಷಕ್ಕೆ 2 ಕೋಟಿ ರೂ. ದೇಣಿಗೆ: ಉದ್ಯಮಿ ಸೇರಿ ಇಬ್ಬರ ಬಂಧನ
ಮುಕೇಶ್ ಶರ್ಮಾ ದೆಹಲಿ ಮೂಲದ ತಂಬಾಕು ವ್ಯಾಪಾರಿ ಹಾಗೂ ಪ್ರಾಪರ್ಟಿ ಡೀಲರ್.
Team Udayavani, Aug 21, 2020, 3:00 PM IST
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ನಕಲಿ ಕಂಪನಿ ಹೆಸರಿನ ಮೂಲಕ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ಆರೋಪದಲ್ಲಿ ಆರ್ಥಿಕ ಅಪರಾಧ ದಳದ ದೆಹಲಿ ಪೊಲೀಸರು ಇಬ್ಬರನ್ನು ಬಂಧಿಸಿರುವುದಾಗಿ ಮೂಲಗಳು ಶುಕ್ರವಾರ (ಆಗಸ್ಟ್ 21, 2020)ದಂದು ತಿಳಿಸಿವೆ.
ದೆಹಲಿ ಪೊಲೀಸರು ಬಂಧಿಸಿದವರಲ್ಲಿ ಒಬ್ಬರು ದೆಹಲಿ ಮೂಲದ ಉದ್ಯಮಿ ಮುಕೇಶ್ ಶರ್ಮಾ ಎಂದು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿಯ ಗುರುತನ್ನು ಈವರೆಗೂ ಬಹಿರಂಗಪಡಿಸಿಲ್ಲ ಎಂದು ವರದಿ ಹೇಳಿದೆ.
2014ರ ಮಾರ್ಚ್ 31ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಡಿಡಿ (ಡಿಮಾಂಡ್ ಡ್ರಾಫ್ಟ್) ಮೂಲಕ 2 ಕೋಟಿ ರೂಪಾಯಿ ದೇಣಿಗೆ ನೀಡಿರುವ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಮುಕೇಶ್ ಶರ್ಮಾ ದೆಹಲಿ ಮೂಲದ ತಂಬಾಕು ವ್ಯಾಪಾರಿ ಹಾಗೂ ಪ್ರಾಪರ್ಟಿ ಡೀಲರ್. ಇದರೊಂದಿಗೆ ಅಂದು ದೆಹಲಿ ಸಚಿವ ಸ್ಥಾನದಿಂದ ವಜಾಗೊಂಡು ನಂತರ ಬಿಜೆಪಿ ಸೇರಿದ್ದ ಕಪಿಲ್ ಮಿಶ್ರಾ ಕೂಡಾ ನಕಲಿ ಕಂಪನಿಗಳ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ಹಣ ಹರಿದು ಬಂದಿರುವುದಾಗಿ ಆರೋಪಿಸಿರುವುದನ್ನು ನೆನಪಿಸಿಕೊಳ್ಳಬಹುದಾಗಿದೆ ಎಂದು ವರದಿ ಹೇಳಿದೆ.
ಆಮ್ ಆದ್ಮಿ ಪಕ್ಷಕ್ಕೆ ಬಂದ ದೇಣಿಗೆಯಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಮಿಶ್ರಾ ದೂರಿದ್ದರು. ಅಲ್ಲದೇ ಸಂಶಯಾಸ್ಪದ 2 ಕೋಟಿ ರೂಪಾಯಿ ದೇಣಿಗೆ ಬಗ್ಗೆಯೂ ಪ್ರಶ್ನೆಯನ್ನು ಹುಟ್ಟುಹಾಕಿತ್ತು ಎಂದು ವರದಿ ತಿಳಿಸಿದೆ. ಹಲವಾರು ನಕಲಿ ಕಂಪನಿಗಳು ಆಮ್ ಆದ್ಮಿ ಪಕ್ಷಕ್ಕೆ ದೇಣಿಗೆ ನೀಡಿದ್ದು, ಇದು ಪಕ್ಷಕ್ಕೂ ಗೊತ್ತಿರುವ ವಿಚಾರವಾಗಿದೆ ಎಂದು ಮಿಶ್ರಾ ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ