ಮೊಬೈಲ್‌ ಡೇಟಾ ಆಧರಿಸಿ ಬೆಂಬಲಿಗರ ಪತ್ತೆ;ತಬ್ಲೀಘಿ ಸಮಾವೇಶದಲ್ಲಿ ಪಾಲ್ಗೊಂಡವರ ಶೋಧಕ್ಕೆ ತಂತ್ರ

ವಿವಿಧ ರಾಜ್ಯಗಳ ಪೊಲೀಸರ ಸಾಥ್‌

Team Udayavani, Apr 6, 2020, 6:35 AM IST

ಮೊಬೈಲ್‌ ಡೇಟಾ ಆಧರಿಸಿ ಬೆಂಬಲಿಗರ ಪತ್ತೆ;ತಬ್ಲೀಘಿ ಸಮಾವೇಶದಲ್ಲಿ ಪಾಲ್ಗೊಂಡವರ ಶೋಧಕ್ಕೆ ತಂತ್ರ

ನಿಜಾಮುದ್ದೀನ್‌ನಲ್ಲಿರುವ ಮಸೀದಿಗೆ ಆಗಮಿಸಿ ತನಿಖೆ ನಡೆಸಿದ ವಿಧಿ ವಿಜ್ಞಾನ ಮತ್ತು ದೆಹಲಿ ಕ್ರೈಮ್‌ ಬ್ರಾಂಚ್‌ನ ಹಿರಿಯ ಅಧಿಕಾರಿಗಳು.

ನವದೆಹಲಿ: ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ತಬ್ಲೀಘಿ ಸಮಾವೇಶದಲ್ಲಿ ಪಾಲ್ಗೊಂಡು ತಲೆಮರೆಸಿಕೊಂಡಿರುವ ಬೆಂಬಲಿಗರನ್ನು ಅವರ ಸೆಲ್‌ ಫೋನ್‌ ಡೇಟಾದಿಂದ ಪತ್ತೆ ಹಚ್ಚಲಾಗುತ್ತಿದೆ.

ಸಮಾವೇಶದಲ್ಲಿ ಪಾಲ್ಗೊಂಡಿದ್ದ ಎಲ್ಲರ ಮೊಬೈಲ್‌ ಜಿಪಿಎಸ್‌ಗಳನ್ನು ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್‌ ಸಿಬ್ಬಂದಿ ಟ್ರ್ಯಾಕ್‌ ಮಾಡಲಾರಂಭಿಸಿದ್ದಾರೆ. ಈ ಮೂಲಕ, ಸಮಾವೇಶದ ನಂತರ ಅಲ್ಲಿಂದ ಚದುರಿ ಹೋಗಿರುವವರನ್ನು ಪತ್ತೆ ಹಚ್ಚಿ ಅವರನ್ನು ನಿಗಾ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ. ಈ ಕಾರ್ಯದಲ್ಲಿ ನಾನಾ ರಾಜ್ಯಗಳ ಪೊಲೀಸರೂ ದೆಹಲಿ ಪೊಲೀಸರೊಂದಿಗೆ ಕೈ ಜೋಡಿಸಿದ್ದಾರೆ.

ಕಳೆದೊಂದು ವಾರದಿಂದ ಸಮರೋಪಾದಿಯಲ್ಲಿ ಸಾಗುತ್ತಿರುವ ಈ ಕೆಲಸದಿಂದ ನೂರಾರು ಜನರನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ. ಇತ್ತೀಚೆಗೆ ಇದೇ ತಂತ್ರದಿಂದ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸಾಗಿದ್ದ ಭಾರತೀಯ ವಾಯುಸೇನೆಯ ಸಿಬ್ಬಂದಿಯೊಬ್ಬರನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ಹಾಗೂ ಅವರ ಒಡನಾಟ ಹೊಂದಿರುವ ಎಲ್ಲರನ್ನೂ ನಿಗಾ ವಲಯಕ್ಕೆ ಕಳುಹಿಸಲಾಗಿದೆ.

ಕೆಂಪು ವಲಯ: ಉತ್ತರ ಪ್ರದೇಶದ ಕಾನ್ಪುರದ ಆರು ಪ್ರಾಂತ್ಯಗಳನ್ನು ಕೆಂಪು ವಲಯಗಳೆಂದು ಗುರುತಿಸಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದಿದ್ದ ನಿಜಾಮುದ್ದೀನ್‌ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗಿದ್ದ ಕೆಲವರು ಈ ಪ್ರಾಂತ್ಯಗಳಲ್ಲಿ ತಿರುಗಾಡಿದ್ದಾರೆ. ಅವರಲ್ಲಿ ಇಬ್ಬರು ವಿದೇಶಿಗರೂ ಸೇರಿದ್ದಾರೆ. ಅವರಿಂದ ಕೋವಿಡ್ ವೈರಸ್ ಸೋಂಕು ಈ ಪ್ರಾಂತ್ಯಗಳಲ್ಲಿ ವ್ಯಾಪಕವಾಗಿ ಹರಡಿರುವ ಸಾಧ್ಯತೆಗಳಿರುವುದರಿಂದ ಈ ಆರೂ ಪ್ರಾಂತ್ಯಗಳನ್ನು ರೆಡ್‌ ಝೋನ್‌ಗಳೆಂದು ಘೋಷಿಸಲಾಗಿದೆ.

ತಬ್ಲೀಘಿಗಳನ್ನು ಬಯ್ದ ಯುವಕನ ಕೊಲೆ: ದೆಹಲಿಯ ಸಮಾವೇಶಕ್ಕೆ ತೆರಳಿ ಹಿಂದಿರುಗಿದ್ದ ತಬ್ಲಿಘಿ ಸಂಘಟನೆಯ ಸದಸ್ಯರನ್ನು ಸೋಂಕು ಹರಡುವವರು ಎಂದು ಬೈದ ಕಾರಣಕ್ಕಾಗಿ 29 ವರ್ಷದ ಯುವಕನೊಬ್ಬನನ್ನು ಆತನ ಮನೆಯ ಮುಂದೆ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾನುವಾರ ನಡೆದಿದೆ.

ಪ್ರಯಾಗ್‌ ರಾಜ್‌ನ ಕಾರೇಲಿಯಲ್ಲಿರುವ ತನ್ನ ಮನೆಯ ಮುಂದೆ ಯುವಕ ನಿಂತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಆಗಮಿಸಿ ಆತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.

ದಕ್ಷಿಣ ಆಫ್ರಿಕಾ ಪ್ರಜೆ ಸಾವು: ನಿಜಾಮುದ್ದೀನ್‌ ಸಮಾವೇಶಕ್ಕೆ ಹಾಜರಾಗಿ ಹಿಂದಿರುಗಿದ್ದ ದಕ್ಷಿಣ ಆಫ್ರಿಕಾದ ಪ್ರಜೆ ಮೌಲಾನಾ ಯೂಸುಫ್ ತೂತ್ಲಾ (80) ಕೋವಿಡ್ 19 ವೈರಸ್ ಸೋಂಕಿನಿಂದಾಗಿ ಭಾನುವಾರ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.