ಸಹಜ ಸ್ಥಿತಿಗೆ ದೆಹಲಿ: ದಂಗೆಕೋರರ ಆಸ್ತಿ ಜಪ್ತಿಗೆ ದಿಲ್ಲಿ ಪೊಲೀಸರ ಚಿಂತನೆ 


Team Udayavani, Mar 1, 2020, 6:45 AM IST

Delhi-violence-min

ನವದೆಹಲಿ: ಗಲಭೆ ಪೀಡಿತ ಈಶಾನ್ಯ ದೆಹಲಿಯಲ್ಲಿ ಪರಿಸ್ಥಿತಿ ಸಹಜಸ್ಥಿತಿಗೆ ಮರಳುತ್ತಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದ ತನಿಖೆ ಚುರುಕಾಗಿದೆ. ದೆಹಲಿ ಪೊಲೀಸರು, ಉತ್ತರಪ್ರದೇಶವನ್ನು ಮಾದರಿಯಾಗಿಟ್ಟುಕೊಂಡು, ದಾಳಿಕೋರರ ಆಸ್ತಿ ಜಪ್ತಿ ಮಾಡಲು ಚಿಂತನೆ ನಡೆಸಿದ್ದಾರೆ.

ಹಿಂಸಾಚಾರದ ವೇಳೆ ನಡೆದ ಕಲ್ಲುತೂರಾಟ, ಬೆಂಕಿ ಹಚ್ಚಿರುವಂಥ ಘಟನೆಗಳಿಂದ ಖಾಸಗಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ನಷ್ಟವುಂಟಾಗಿದ್ದು, ಅದನ್ನು ದಾಳಿಕೋರರಿಂದಲೇ ಭರಿಸಲು ಹಾಗೂ ಅವರಿಗೆ ದಂಡ ವಿಧಿಸಲು ಯೋಜಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ನಷ್ಟದ ಮೊತ್ತವನ್ನು ಅಂದಾಜಿಸುವಲ್ಲಿ ಸ್ಥಳೀಯಾಡಳಿತಕ್ಕೆ ನೆರವಾಗುವಂತೆ ಈಗಾಗಲೇ ಕ್ರೈಂ ಬ್ರಾಂಚ್‌ನ ವಿಶೇಷ ತನಿಖಾ ತಂಡ ಹಾಗೂ ಸ್ಥಳೀಯ ಪೊಲೀಸರಿಗೆ ಸೂಚಿಸಲಾಗಿದೆ.

ವಾಟ್ಸ್‌ಆ್ಯಪ್‌ ಸಂಖ್ಯೆ: ಪ್ರಚೋದನಕಾರಿ ಅಥವಾ ದ್ವೇಷಪೂರಿತ ಸಂದೇಶಗಳು ಬಂದರೆ, ಅವುಗಳ ಕುರಿತು ದೂರು ನೀಡಲು ವಾಟ್ಸ್‌ಆ್ಯಪ್‌ ಸಂಖ್ಯೆಯೊಂದನ್ನು ಆರಂಭಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ. ಜತೆಗೆ, ಅಂಥ ಸಂದೇಶಗಳನ್ನು ಇತರರಿಗೆ ಫಾರ್ವರ್ಡ್‌ ಮಾಡುವುದು ಅಪರಾಧವಾಗಿದ್ದು, ಆ ರೀತಿ ಮಾಡದಂತೆಯೂ ಜನರಿಗೆ ಸೂಚಿಸಲು ಮುಂದಾಗಿದೆ.

ಶಾಂತಿ ಯಾತ್ರೆ: ದೆಹಲಿ ಗಲಭೆ ಹಿನ್ನೆಲೆಯಲ್ಲಿ “ಜಿಹಾದಿ ಭಯೋತ್ಪಾದನೆ’ ವಿರೋಧಿಸಿ ಜಂತರ್‌ಮಂತರ್‌ನಲ್ಲಿ ಶನಿವಾರ ಶಾಂತಿ ಯಾತ್ರೆ ನಡೆದಿದೆ. ಜೈ ಶ್ರೀ ರಾಮ್‌, ಭಾರತ್‌ ಮಾತಾ ಕೀ ಜೈ ಹಾಗೂ ದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆಗಳನ್ನು ಕೂಗುತ್ತಾ ನೂರಾರು ಮಂದಿ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿ ಶಾಂತಿ ವೇದಿಕೆ ಎಂಬ ಎನ್‌ಜಿಒ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಕೂಡ ಭಾಗಿಯಾಗಿದ್ದರು.

ಈ ನಡುವೆ, ಹಿಂಸಾಚಾರದಲ್ಲಿ ಮೃತಪಟ್ಟ ಪೊಲೀಸ್‌ ಮುಖ್ಯ ಪೇದೆ ಹಾಗೂ ಗುಪ್ತಚರ ಇಲಾಖೆ ಸಿಬ್ಬಂದಿಯ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನವನ್ನು ನೀಡುವುದಾಗಿ ಬಿಜೆಪಿ ಸಂಸದ ಪರ್ವೇಶ್‌ ವರ್ಮಾ ಘೋಷಿಸಿದ್ದಾರೆ.

6 ಮಂದಿಯ ಬಂಧನ: ಶನಿವಾರ ದೆಹಲಿ ಮೆಟ್ರೋ ರೈಲಿನೊಳಗೆ ಹಾಗೂ ರಾಜೀವ್‌ ಚೌಕ್‌ ಮೆಟ್ರೋ ನಿಲ್ದಾಣದಲ್ಲಿ ಪೌರತ್ವ ಕಾಯ್ದೆಯ ಬೆಂಬಲಿಗರು “ಗೋಲಿ ಮಾರೋ ಸಾಲೋಂ ಕೋ'(ದ್ರೋಹಿಗಳಿಗೆ ಗುಂಡಿಕ್ಕಿ) ಎಂದು ಘೋಷಣೆ ಕೂಗಿದ್ದು, ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.

ಮಾ.7ರವೆರೆಗೂ ಶಾಲೆಗೆ ರಜೆ: ಹಿಂಸಾಚಾರದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯ ಎಲ್ಲ ಶಾಲೆಗಳಿಗೂ ಮಾರ್ಚ್‌ 7ರವೆರೆಗೆ ರಜೆ ಘೋಷಿಸಲಾಗಿದೆ. ಜತೆಗೆ, ವಾರ್ಷಿಕ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

ಮನೆ ಕಟ್ಟಿಸಿಕೊಡಲಿದೆ ಬಿಎಸ್‌ಎಫ್: ದೆಹಲಿ ಹಿಂಸಾಚಾರದ ವೇಳೆ ದುಷ್ಕರ್ಮಿಗಳು ಬಿಎಸ್‌ಎಫ್ ಯೋಧರೊಬ್ಬರ ಮನೆಗೂ ಬೆಂಕಿ ಹಚ್ಚಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಹಿನ್ನೆಲೆಯಲ್ಲಿ 29 ವರ್ಷದ ಯೋಧ ಮೊಹಮ್ಮದ್‌ ಅನೀಸ್‌ ಅವರಿಗೆ ತಾವೇ ಮನೆ ಕಟ್ಟಿ, ಅವರ ಮದುವೆಯ ಉಡುಗೊರೆಯಾಗಿ ನೀಡಲಿದ್ದೇವೆ ಎಂದು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಶನಿವಾರ ಘೋಷಿಸಿದೆ. ಏಪ್ರಿಲ್‌ ತಿಂಗಳಲ್ಲಿ ಅನೀಸ್‌ ಅವರ ಮದುವೆಯಿದ್ದು, ಅದಕ್ಕೂ ಮೊದಲೇ ಮನೆ ನಿರ್ಮಾಣ ಕಾರ್ಯ ಮುಗಿಸಲು ಬಿಎಸ್‌ಎಫ್ ನಿರ್ಧರಿಸಿದೆ.

ಸ್ಫೋಟಕ ಮಾಹಿತಿ ಬಹಿರಂಗ
42 ಮಂದಿಯನ್ನು ಬಲಿಪಡೆದುಕೊಂಡ ದೆಹಲಿ ಗಲಭೆಗೆ ಸಂಬಂಧಿಸಿದ ತನಿಖೆಯಲ್ಲಿ ಅನೇಕ ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಗಲಭೆಕೋರರು ವಾಣಿಜ್ಯಿಕ ಆ್ಯಸಿಡ್‌ಗಳನ್ನು ಸಂಗ್ರಹಿಸಿಟ್ಟುಕೊಂಡು, ದಾಳಿ ವೇಳೆ ಬಳಸಿದ್ದಾರೆ ಎನ್ನಲಾಗಿದೆ. ಮುಸ್ತಫಾಬಾದ್‌ನಲ್ಲಿ ಅನೇಕ ಅಕ್ರಮ ಫ್ಯಾಕ್ಟರಿಗಳಿದ್ದು, ಅಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಇಂಥ ರಾಸಾಯನಿಕಗಳನ್ನು ಬಳಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇನ್ನು, ಮದ್ಯದಂಗಡಿಗಳಿಂದ ಲೂಟಿ ಮಾಡಲಾದ ಆಲ್ಕೋಹಾಲ್‌ ಬಾಟಲಿಗಳನ್ನು ಬಳಸಿ, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಗಲಭೆ ವೇಳೆ ಬಳಸಲಾಗಿದ್ದ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, .32 ಮಿ.ಮೀ.(25 ಮೀಟರ್‌ ವ್ಯಾಪ್ತಿ) ಮತ್ತು .9 ಮಿ.ಮೀ.(70 ಮೀಟರ್‌ ವ್ಯಾಪ್ತಿ)ಯ ಪಿಸ್ತೂಲುಗಳನ್ನು ಅತಿ ಹೆಚ್ಚು ಬಳಸಿರುವುದು ಗಮನಕ್ಕೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ಟೈಮ್ಸ್‌ ನೌ ವರದಿ ಮಾಡಿದೆ.

ಒಬ್ಬ ಮುಸ್ಲಿಮನಾಗಿ ನಾನು ಭಾರತದಲ್ಲಿ ಸುರಕ್ಷಿತ ಭಾವ ಹೊಂದಿದ್ದೇನೆ. ಪೌರತ್ವ ಕಾಯ್ದೆಯು ಪೌರತ್ವವನ್ನು ಬಯಸುವ ಜನರಿಗೆ ತ್ವರಿತವಾಗಿ ನೀಡಲು ಜಾರಿಯಾಗುತ್ತಿದೆಯೇ ವಿನಾ, ಇಲ್ಲಿರುವ ಭಾರತೀಯರಿಗಾಗಿ ಅಲ್ಲ.
– ಅದ್ನಾನ್‌ ಸಾಮಿ, ಗಾಯಕ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.