ದಿಲ್ಲಿ: ಮುಂದುವರಿದ ಜಡಿ ಮಳೆ, ಕೃತಕ ನೆರೆ, ಜನ,ವಾಹನ ಸಂಚಾರ ಬಾಧಿತ
Team Udayavani, Jul 27, 2018, 11:24 AM IST
ಹೊಸದಿಲ್ಲಿ : ದಿಲ್ಲಿ ಹಾಗೂ ನೆರೆಯ ನೋಯ್ಡಾ, ಗುರುಗ್ರಾಮ ಮತ್ತು ಫರೀದಾಬಾದ್ ನಿನ್ನೆ ಗುರುವಾರ ಜಡಿಮಳೆ ಕಂಡ ಕಾರಣ ತೀವ್ರವಾಗಿ ಜನಜೀವನ ಹಾಗೂ ವಾಹನ ಸಂಚಾರ ಬಾಧಿತವಾಗಿದ್ದು ಇಂದು ಶುಕ್ರವಾರ ರಾಷ್ಟ್ರ ರಾಜಧಾನಿ ಎನ್ಸಿಆರ್ ಪ್ರದೇಶದಲ್ಲಿ ಕಾರ್ಮೋಡಗಳು ಮುಸುಕಿರುವ ಹಿನ್ನೆಲೆಯಲ್ಲಿ ಇಂದು ಕೂಡ ಜಡಿಮಳೆಯಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ ಮತ್ತು ಯಮುನಾ ನದಿ ಅತ್ಯಧಿಕ ಮಟ್ಟವನ್ನು ತಲುಪಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.
ಈ ವಾರಾಂತ್ಯದ ವರೆಗೂ ದಿಲ್ಲಿ ಹಾಗೂ ನೆರೆಯ ಪ್ರದೇಶಗಳಲ್ಲಿ ಜಡಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ನಿನ್ನೆಯ ಜಡಿ ಮಳೆಗೆ ದಿಲ್ಲಿಯ ತಗ್ಗು ಪ್ರದೇಶಗಳಲ್ಲಿ ನೀರಿನಿಂದ ತುಂಬಿದ್ದು ವಾಹನ ಮತ್ತು ಜನ ಸಂಚಾರ ತೀವ್ರವಾಗಿ ಬಾಧಿತವಾಗಿತ್ತು. ದಿಲ್ಲಿಯ ಅನೇಕ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೃತಕ ನೆರೆ ಬಹುತೇಕ ಕಡೆಗಳಲ್ಲಿ ಕಂಡು ಬಂದಿತ್ತು.
ಇಂದು ಶುಕ್ರವಾರ ಕೂಡ ದಿಲ್ಲಿಯ ಬಹುತೇಕ ಪ್ರದೇಶಗಳು ನೀರಿನಿಂದ ತುಂಬಿಕೊಂಡಿರುವುದು ಕಂಡು ಬಂದಿದೆ. ಎನ್ಸಿಆರ್ ಆದ್ಯಂತ ನಾಗರಿಕ ಸೌಕರ್ಯಗಳು ತೀವ್ರವಾಗಿ ಬಾಧಿತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ