ಬಾಕಿ ಸಂಬಳ ಕೇಳಲು ಹೋದ ಯುವತಿಯ ಮೇಲೆ ನಾಯಿ ಛೂ ಬಿಟ್ಟ ಪಾರ್ಲರ್ ಮಾಲಕಿ: ನಂತರ ಆಗಿದ್ದೇನು ?
Team Udayavani, Jul 8, 2020, 9:40 AM IST
ದೆಹಲಿ: ಬಾಕಿ ಇರುವ ಸಂಬಳ ಕೇಳಿದ ತನ್ನ ಉದ್ಯೋಗಿಯ ಮೇಲೆ ಬ್ಯೂಟಿ ಪಾರ್ಲರ್ ಮಾಲಕಿಯೊಬ್ಬರು ನಾಯಿಯನ್ನು ಛೂ ಬಿಟ್ಟ ಘಟನೆ ದಕ್ಷಿಣ ದೆಹಲಿಯ ಮಾಲ್ವಿಯಾ ನಗರ ಪ್ರದೇಶದಲ್ಲಿ ನಡೆದಿದೆ.
ಜೂನ್ 11 ರಂದು ಈ ಘಟನೆ ನಡೆದಿದ್ದು, ನಾಯಿಯ ದಾಳಿಗೆ ಉದ್ಯೋಗಿ ಯುವತಿ ತತ್ತರಿಸಿ ಹೋಗಿದ್ದಾರೆ. ಮಾತ್ರವಲ್ಲದೆ ನಾಯಿ ಎಗ್ಗಿಲ್ಲದೆ ಕಚ್ಚಿದ ಪರಿಣಾಮ ಮುಖ ಮತ್ತು ಕುತ್ತಿಗೆಗೆ ಕನಿಷ್ಠ 15 ಹೊಲಿಗೆಗಗಳನ್ನು ಹಾಕಲಾಗಿದೆ ಎಮದು ಪೊಲೀಸರು ತಿಳಿಸಿದ್ದಾರೆ.
ನಾಯಿ ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡ ಯುವತಿಯನ್ನು ಮೊದಲು ಮದನ್ ಮೋಹನ್ ಮಾಳವಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು,ನಂತರ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ದೆಹಲಿ ಪೊಲೀಸರು ಬ್ಯೂಟಿ ಪಾರ್ಲರ್ ಮಾಲಕಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಹಿನ್ನಲೆ:
ಸಪ್ನಾ ಎಂಬ ಯುವತಿ ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ಬ್ಯೂಟಿಪಾರ್ಲರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೋವಿಡ್-19 ಕಾರಣದಿಂದ ರಾಷ್ಟ್ರವ್ಯಾಪಿ ಲಾಕ್ ಡೌನ್ ವಿಧಿಸುವ ಎರಡು ದಿನಗಳ ಮುನ್ನ ಕೆಲಸಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಆವರೆಗೂ ಸುಮಾರು ಒಂದೂವರೆ ತಿಂಗಳು ಪಾರ್ಲರ್ ನಲ್ಲಿ ಕೆಲಸ ಮಾಡಿದ್ದರು.
ಆದರೇ ಜೂನ್ 11 ರಂದು ಬಾಕಿ ಕೇಳಲು ಹೋದ ಸಮಯದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ತನ್ನ ಮನೆಗೆ ಬರುವಂತೆ ತಿಳಿಸಿದ್ದರು. ಮಾತ್ರವಲ್ಲದೆ ಮನೆ ಕೆಲಸ ಮಾಡಲು ಒತ್ತಾಯಿಸಿದ್ದರು. ಹಾಗೆ ಮಾಡಲು ನಿರಾಕರಿಸಿದಾಗ ನಾಯಿಯನ್ನು ಛೂ ಬಿಟ್ಟು ಕಚ್ಚಿಸಿದ್ದಾರೆ ಎಂದು ಸಂತ್ರಸ್ಥೆ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಈ ಕಾರಣದಿಂದ ಬ್ಯೂಟಿ ಪಾರ್ಲರ್ ಮಾಲಕಿ ರಜನಿಯ ಮೇಲೆ ಐಪಿಸಿ ಸೆಕ್ಷನ್ 289 (ಪ್ರಾಣಿಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ) ಮತ್ತು ಮತ್ತು ಐಪಿಸಿ ಸೆಕ್ಷನ್ 308ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಎಂದು ಡಿಸಿಪಿ ಅತುಲ್ ಕುಮಾರ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?