ದೆಹಲಿ ಪೊಲೀಸರ ವಶಕ್ಕೆ ತಾಹಿರ್ ಹುಸೇನ್
ಹೆಚ್ಚುವರಿ ಮ್ಯಾಜಿಸ್ಟೇಟ್ ಕೋರ್ಟ್ನಲ್ಲಿ ಬಂಧನ;ಗುಪ್ತಚರ ಇಲಾಖೆ ಸಿಬ್ಬಂದಿ ಅಂಕಿತ್ ಶರ್ಮಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ತಾಹಿರ್
Team Udayavani, Mar 5, 2020, 8:09 PM IST
ನವದೆಹಲಿ: ತಲೆಮರೆಸಿಕೊಂಡಿದ್ದ ಆಮ್ ಆದ್ಮಿ ಪಾರ್ಟಿಯ ಉಚ್ಚಾಟಿತ ನಾಯಕ ತಾಹಿರ್ ಹುಸೇನ್ರನ್ನು ದೆಹಲಿ ಪೊಲೀಸರು ಗುರವಾರ ಬಂಧಿಸಿದ್ದಾರೆ.
ಗುಪ್ತಚರ ಇಲಾಖೆಯ ಸಿಬ್ಬಂದಿ ಅಂಕಿತ್ ಶರ್ಮಾರ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ತಾಹಿರ್, ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗಿ ತಾವು ಕೋರ್ಟ್ ಸಮ್ಮುಖದಲ್ಲಿ ಶರಣಾಗುವುದಾಗಿ ಕೇಳಿಕೊಂಡಿದ್ದರು. ಇವರ ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಹೆಚ್ಚುವರಿ ಮೆಟ್ರೋಪಾಲಿಟನ್ ಕೋರ್ಟ್ನ ಮುಖ್ಯ ನ್ಯಾಯಾಧೀಶ ವಿಶಾಲ್ ಪಹುಜಾ, ಅರ್ಜಿಯನ್ನು ವಜಾಗೊಳಿಸಿದರು. ಈ ಹಿನ್ನೆಲೆಯಲ್ಲಿ, ಪೊಲೀಸರು ತಾಹಿರ್ರನ್ನು ಬಂಧಿಸಿದ್ದಾರೆ.
ಅರ್ಜಿ ವಜಾ ಆಗಿದ್ದೇಕೆ?: ಪ್ರಕರಣ ಜರುಗಿರುವುದು ದಯಾಳ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಹಾಗಾಗಿ, ತಾಹಿರ್, ಕರ್ಕಾಡೂಮ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಹಾಗಾಗಿ, ತಾಂತ್ರಿಕವಾಗಿ ಈ ಅರ್ಜಿ ಮೆಟ್ರೋಪಾಲಿಟನ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾ. ವಿಶಾಲ್ ಅರ್ಜಿ ತಿರಸ್ಕರಿಸಿದ್ದಾರೆ. ಈ ನಡುವೆ, ತಮ್ಮ ಜೀವಕ್ಕೆ ಅಪಾಯವಿರುವುದರಿಂದ ಕರ್ಕಾಡೂಮ ನ್ಯಾಯಾಲಯದ ಬದಲು ಮೆಟ್ರೋಪಾಲಿಟನ್ ಕೋರ್ಟ್ ಮುಂದೆ ಶರಣಾಗಲು ಅವಕಾಶ ನೀಡುವಂತೆ ತಾಹಿರ್ ಕೋರಿದ್ದೂ ವ್ಯರ್ಥವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ