ದಿಲ್ಲಿ: 25ರ ಮದುಮಗನ ಮೇಲೆ ಗುಂಡೆಸೆದ ಅಪರಿಚಿತ ದುಷ್ಕರ್ಮಿಗಳು
Team Udayavani, Nov 20, 2018, 11:59 AM IST
ಹೊಸದಿಲ್ಲಿ: ನಿನ್ನೆ ಸೋಮವಾರ ರಾತ್ರಿ ಮದುವೆ ದಿಬ್ಬಣ ಸಾಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು 25ರ ಹರೆಯದ ಮದುಮಗನ ಮೇಲೆ ಗುಂಡೆಸೆದು ಪರಾರಿಯಾದ ಘಟನೆ ನಡೆದಿದೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮದುಮಗ ಬಾದಲ್ ದಿಬ್ಬಣದಲ್ಲಿ ಮದನ್ಗಿರ್ ಕಡೆಗಿನ ಮದುವೆ ಮಂಟಪಕ್ಕೆ ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಆತನ ಮೇಲೆ ಗುಂಡು ಹಾರಿಸಿದ್ದರು.
ಮದುಮಗ ಬಾದಲ್ ಅವರ ಭುಜಕ್ಕೆ ಗುಂಡೇಟು ತಗಲಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಒಯ್ಯಲಾಯಿತು. ಅವರು ಪ್ರಾಣಾಪಾಯದಿಂದ ಪಾರಾಗಿರುವುದು ತಿಳಿದು ಬಂದಿದೆ.
ಮದುಮಗ ಬಾದಲ್ ಮೇಲೆ ಗುಂಡಿನ ದಾಳಿ ನಡೆಯಲು ಕಾರಣವೇನೆಂದು ಈಗಿನ್ನು ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!