Shocking… ಬುರ್ಖಾ ಧರಿಸಿ ತಂಗಿಯ ಮದುವೆಗೆಂದು ಮಾಡಿಟ್ಟ ಆಭರಣಗಳನ್ನೇ ದೋಚಿದ ಅಕ್ಕ


Team Udayavani, Feb 5, 2024, 10:31 AM IST

ತನ್ನ ಮನೆಗೆ ಕನ್ನ… ಬುರ್ಖಾ ಧರಿಸಿ ತಂಗಿಯ ಮದುವೆಗೆಂದು ಮಾಡಿಟ್ಟ ಆಭರಣಗಳನ್ನು ದೋಚಿದ ಅಕ್ಕ

ನವದೆಹಲಿ: ದೆಹಲಿಯಲ್ಲೊಂದು ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ, ಹೌದು ಮಹಿಳೆಯೊಬ್ಬಳು ತನ್ನ ಮನೆಗೆ ಕನ್ನ ಹಾಕಿ ತಂಗಿಯ ಮದುವೆಗೆಂದು ತೆಗೆದಿಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇದೀಗ ಪೊಲೀಸ್ ಠಾಣೆಯಲ್ಲಿ ಕಂಬಿ ಎನಿಸುತ್ತಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಏನಿದು ಪ್ರಕರಣ:
ದೆಹಲಿಯ ಉತ್ತಮ್ ನಗರದ ಮನೆಯೊಂದರಲ್ಲಿ ಕಳ್ಳತನವಾಗಿರುವ ಕುರಿತು ಮಹಿಳೆಯೊಬ್ಬರು ದೂರು ನೀಡಿದ್ದಾರೆ, ದೂರು ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ ಆದರೆ ಪೊಲೀಸರಿಗೆ ಕಳ್ಳರು ಮನೆಯೊಳಗೇ ಬಲವಂತವಾಗಿ ಪ್ರವೇಶಿಸಿದ ಯಾವುದೇ ಕುರುಹುಗಳು ಮೇಲ್ನೋಟಕ್ಕೆ ಸಿಗಲಿಲ್ಲ, ಅಲ್ಲದೆ ಮನೆಯಲ್ಲಿನ ಎಲ್ಲ ವಸ್ತುಗಳು ಚೆಲ್ಲಾಪಿಲ್ಲಿಯಾಗದೆ ಸರಿಯಾಗಿಯೇ ಇದ್ದವು ಇದರಿಂದ ಅನುಮಾನಗೊಂಡ ಪೊಲೀಸರು ಮನೆಯ ಸುತ್ತಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ.

ಸಿಸಿ ಕ್ಯಾಮೆರಾ ಪರಿಶೀಲನೆ ವೇಳೆ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿರುವುದು ಕಂಡು ಬಂದಿದೆ.
ಈ ಕುರಿತು ಮಹಿಳೆಯ ಪತ್ತೆಗೆ ಬಲೆ ಬಿಸಿದಾಗ ಸಿಕ್ಕಿದ್ದು ಕಳ್ಳತನವಾದ ಮನೆಯ ಹಿರಿಯ ಮಗಳು ಶ್ವೇತಾ, ಈಕೆಯನ್ನು ವಿಚಾರಣೆ ನಡೆಸಿದಾಗ ನಿಜ ವಿಚಾರ ಬೆಳಕಿಗೆ ಬಂದಿದೆ.

ತಂಗಿಯ ಮೇಲಿನ ಅಸೂಯೆ:
ಪೊಲೀಸರು ಹಿರಿಯ ಸಹೋದರಿ ಶ್ವೇತಾ ಅವರನ್ನು ವಿಚಾರಣೆ ನಡೆಸಿದ ವೇಳೆ ತಾನೇ ಚಿನ್ನಾಭರಣಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾಳೆ ಅಲ್ಲದೆ ತನ್ನ ತಾಯಿ ತನಗಿಂತ ಜಾಸ್ತಿ ತನ್ನ ತಂಗಿಯನ್ನು ಪ್ರೀತಿಸುತ್ತಿದ್ದರು ಆಕೆಯ ಮೇಲಿನ ಅಸೂಯೆಯಿಂದ ಆಕೆಯ ಮದುವೆಗೆಂದು ತೆಗೆದಿಟ್ಟಿದ್ದ ಚಿನ್ನಾಭರಣಗಳನ್ನು ಕದಿಯುವ ನಿರ್ಧಾರಕ್ಕೆ ಬಂದೆ ಎಂದು ಶ್ವೇತಾ ಹೇಳಿಕೊಂಡಿದ್ದಾಳೆ.

ಘಟನೆ ಕಳೆದ ತಿಂಗಳು 30 ರಂದು ನಡೆದಿದ್ದು ಇದಕ್ಕೂ ಮೊದಲು ಶ್ವೇತಾ ಕಳ್ಳತನಕ್ಕೆ ಪ್ಲಾನ್ ಮಾಡಿ ತನ್ನ ತಾಯಿಯ ಬಳಿ ಕಪಾಟಿನ ಹಾಗೂ ಮನೆಯ ಕೀಗಳನ್ನು ಪಡೆದುಕೊಂಡಿದ್ದರು ಆದರೆ ತಾಯಿಗೆ ತನ್ನ ಮಗಳು ಈ ಉದ್ದೇಶಕ್ಕಾಗಿ ಕೀ ಪಡೆದುಕೊಂದೊಂಡಿದ್ದಳು ಎಂದು ಗೊತ್ತಿರಲಿಲ್ಲ. ಕೊನೆಗೆ ಪೊಲೀಸರು ಮಹಿಳೆ ಬಳಿ ಇದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ಕೊಂಡಿದ್ದು ಅದರಲ್ಲಿ ಕೆಲವೊಂದು ಆಭರಣಗಳನ್ನು ಮಹಿಳೆ ಮಾರಿದ್ದು ತನಗೆ ತುರ್ತು ಹಣದ ಅವಶ್ಯಕತೆ ಇತ್ತು ಹಾಗಾಗಿ ಅದನ್ನು ಮಾರಾಟ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಶೌಚಾಲಯದಲ್ಲಿ ಬುರ್ಖಾ ಧರಿಸಿದ ಮಹಿಳೆ:
ಕಳ್ಳತನಕ್ಕೆ ಯತ್ನ ನಡೆಸುವ ಮುನ್ನ ಯಾರಿಗೂ ತನ್ನ ಪರಿಚಯ ಸಿಗಬಾರದು ಎಂದು ಶ್ವೇತಾ ಇಲ್ಲಿನ ಸಾರ್ವಜನಿಕ ಶೌಚಾಲಯದಲ್ಲಿ ಬುರ್ಖಾ ಧರಿಸಿ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೀ ಬಳಸಿ ಕಳ್ಳತನ ನಡೆಸಿ ಪರಾರಿಯಾಗಿದ್ದಳು ಜೊತೆಗೆ ಕಳ್ಳತನದ ವಿಚಾರ ಮನೆಯವರಿಗೆ ಗೊತ್ತಾದ ಬಳಿಕ ತಾಯಿಯ ಜೊತೆ ಏನು ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಳು.

ಸದ್ಯ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಇನ್ನೂ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Chile: ಸಾವಿನ ಸಂಖ್ಯೆ 99ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ, ಸಾವಿರಾರು ಮನೆಗಳು ಭಸ್ಮ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.