ಕೋವಿಡ್-19 ಭೀತಿ: ಶಹೀನ್ ಭಾಗ್ ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ ಪೊಲೀಸರು
Team Udayavani, Mar 24, 2020, 8:56 AM IST
ನವದೆಹಲಿ: ಭಾರತದಾದ್ಯಂತ ಕೋವಿಡ್-19 ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯ ಶಹೀನ್ ಭಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಧರಣಿ ಸ್ಥಳದಿಂದ ಪ್ರತಿಭಟನಕಾರರನ್ನು ಪೊಲೀಸರು ತೆರವುಗೊಳಿಸಿದ್ದಾರೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ 100 ದಿನಗಳಿಂದ ಶಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಕೋವಿಡ್ 19 ವೈರಸ್ ಹಬ್ಬುವ ಭೀತಿಯಿಂದ ಪ್ರತಿಭಟನಾಕಾರರ ಸಂಖ್ಯೆಯೂ ದಿನೇ ದಿನೇ ಕಡಿಮೆಯಾಗುತ್ತಿತ್ತು. ಮಾತ್ರವಲ್ಲದೆ ಪ್ರತಿಭಟನಾ ಸ್ಥಳದಲ್ಲಿ ಜನರು ಪರಸ್ಪರ ಅಂತರ ಕಾಯ್ದುಕೊಂಡಿದ್ದರು, ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಧರಣಿಯನ್ನು ಮುಂದುವರೆಸಿದ್ದರು,
ಆದರೆ ದೆಹಲಿಯಾದ್ಯಂತ ಲಾಕ್ ಡೌನ್ ಮಾಡಲು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಪ್ರತಿಭಟನಾ ಸ್ಥಳದಿಂದ ಈ ಮೊದಲೇ ತೆರಳುವಂತೆ ಪೊಲೀಸರು ವಿನಂತಿ ಮಾಡಿಕೊಂಡಿದ್ದರು. ಆದರೇ ಧರಣಿ ನಿರತರು ಜಗ್ಗದ ಕಾರಣ ಕಾನೂನಿನ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಗ್ನೇಯ ದೆಹಲಿಯ ಪೊಲೀಸ್ ಉಪ ಆಯುಕ್ತ ಆರ್ ಪಿ ಮೀನಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!