ಮಿಂಚಿದ ಸುದ್ದಿ : ಕುದುರೆ ಏರಿ ಬಂದ ಡೆಲಿವರಿ ಬಾಯ್!
Team Udayavani, Jan 14, 2021, 7:10 AM IST
ಶ್ರೀನಗರ : ಶ್ರೀನಗರ ಸೇರಿದಂತೆ ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಹಿಮ ಮಳೆಯು ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ವಾಹನಗಳು, ವಿಮಾನಗಳ ಸಂಚಾರಕ್ಕೂ ಮಂಜಿನ ಧಾರೆಯಿಂದ ತೊಂದರೆಯಾಗಿದೆ. ಪರಿಸ್ಥಿತಿ ಹೀಗಿರುವಾಗಲೂ ಆನ್ಲೈನ್ ಡೆಲಿವರಿ ನೀಡುವ ಯುವಕನೊಬ್ಬ ತನ್ನ ಕರ್ತವ್ಯವನ್ನು ಪೂರೈಸಿದ ಪರಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿರಂತರ ಹಿಮ ಸುರಿಯುತ್ತಿರುವ ಕಾರಣ ಬೈಕ್ನಲ್ಲಿ ಬರಲು ಸಾಧ್ಯವಾಗದೇ, ಈ ಡೆಲಿವರಿ ಬಾಯ್ ಕುದುರೆಯನ್ನೇರಿ ಬಂದಿದ್ದಾನೆ. ಕೊರೆಯುವ ಚಳಿ, ಮಂಜಿನ ಮಳೆಯ ನಡುವೆಯೇ ಕುದುರೆ ಸವಾರಿ ಮಾಡುತ್ತಾ ಬಂದ ಯುವಕ, ಗ್ರಾಹಕರಿಗೆ ಆಹಾರದ ಪಾರ್ಸೆಲ್ ಕೊಟ್ಟು ಮರಳಿದ್ದಾನೆ. ಈ ವೀಡಿಯೋ ವೈರಲ್ ಆಗಿದ್ದು, ಯುವಕನ ಬದ್ಧತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ