ಡೆಲ್ಟಾ ರೂಪಾಂತರಿ ಸೋಂಕಿನಿಂದ ರಕ್ತ ಹೆಪ್ಪುಗಟ್ಟುವಿಕೆಯ ಲಕ್ಷಣಗಳು ಪತ್ತೆ : ಅಧ್ಯಯನ

ಆಲ್ಫಾ ರೂಪಾಂತರಿಗಿಂತ ಶೇ. 50 ರಷ್ಟು ವೇಗದಲ್ಲಿ ಹರಡುತ್ತದೆ ಡೆಲ್ಟಾ

Team Udayavani, Jun 8, 2021, 6:23 PM IST

Delta variant: New symptoms, faster spread disturbing doctors treating Covid-19

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರಿಯನ್ನು B.1.617.2 ಎಂದು ಗುರುತಿಸಲಾಗಿದ್ದು, ಕೋವಿಡ್ ಸೋಂಕಿನ ಎರಡನೇ ಅಲೆಯ ಹಠಾತ್ ಏರಿಕೆಗೆ ಈ ರೂಪಂತರವೇ ಮುಖ್ಯ ಕಾರಣವೆಂದು ಹೇಳಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ ಒ) ಕಳೆದ ತಿಂಗಳು ಈ ರೂಪಾಂತರಿ ಸೋಂಕನ್ನು ‘ವೇರಿಯಂಟ್ ಆಫ್ ಕನ್ಸರ್ನ್’  (ವಿಒಸಿ) ಎಂದು ವರ್ಗೀಕರಿಸಿತ್ತು. ಕಳೆದ ವರ್ಷ ಯುನೈಟೆಡ್ ಕಿಂಗ್‌ ಡಂ ನಲ್ಲಿ ಪತ್ತೆಯಾದ ಆಲ್ಫಾ ರೂಪಾಂತರಕ್ಕಿಂತ ಇದು ಹೆಚ್ಚು ಪ್ರಬಲವಾಗಿದೆ ಎಂದು ಡಬ್ಲ್ಯು ಎಚ್‌ ಒ ಹೇಳಿತ್ತು.

ಇದನ್ನೂ ಓದಿ : ದೇಶದಲ್ಲಿ ಶೇ.79ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ, ಚೇತರಿಕೆ ಪ್ರಮಾಣ ಶೇ.94: ಸಚಿವಾಲಯ

ಇನ್ನು,  ಭಾರತದಲ್ಲಿ ಪತ್ತೆಯಾದ ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರವು ಅತ್ಯಂತ ತೀವ್ರವಾಗಿದೆಯೇ ಎಂದು ಪರಿಶೀಲಿಸಲು ವಿಶ್ವಾದ್ಯಂತ ವೈದ್ಯರು ಈಗ ಅಧ್ಯಯನ ನಿರತರಾಗಿದ್ದಾರೆ ಎನ್ನುವುದರ ಜೊತೆಗೆ ಆತಂಕಕಾರಿ ವರದಿಯೊಂದು ಈಗ ಹೊರಬಿದ್ದಿದೆ.

ಕೋವಿಡ್ 19 ಡೆಲ್ಟಾ ರೂಪಾಂತರಿ ಸೋಂಕಿನಿಂದ ಕಾಣಿಸಿಕೊಳ್ಳುತ್ತಿದೆ ಹೊಸ ಲಕ್ಷಣಗಳು :

ಡೆಲ್ಟಾ ರೂಪಾಂತರಿಯಿಂದ ಕೋವಿಡ್ 19 ಸೋಂಕಿತರಲ್ಲಿ ಶ್ರವಣ ದೋಷ, ತೀವ್ರ ಗ್ಯಾಸ್ಟ್ರಿಕ್ ತೊಂದರೆಗಳು ಮತ್ತು ರಕ್ತ ಹೆಪ್ಪುಗಟ್ಟುವಿಕೆ ಮುಂತಾದ ಕೆಲವು ಅಪರಿಚಿತ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ಎಂಬ ಆಘಾತಕಾರಿ ವಿಷಯವೊಂದು ವೈದ್ಯಕೀಯ ಅಧ್ಯಯನ ವರದಿ ತಿಳಿಸಿದೆ.

ಇನ್ನು,  ಆಲ್ಫಾ ಜೊತೆಗೆ, ಇತರ ರೂಪಾಂತರಿಗಳಾದ, ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಬೀಟಾ ಕೋವಿಡ್ ರೂಪಾಂತರಿ ಸೋಂಕು ಮತ್ತು ಬ್ರೆಜಿಲ್‌ ನಲ್ಲಿ ಪತ್ತೆಯಾದ ಗಾಮಾ ರೂಪಾಂತರಿ ಸೋಂಕಿನಿಂದ ಇಂತಹ ಯಾವುದೇ ಅಪರಿಚಿತ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಕಳೆದ ತಿಂಗಳು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನ ತಿಳಿಸಿತ್ತು.

ಡೆಲ್ಟಾ ರೂಪಾಂತರಿಯು 60 ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದ್ದು, ಯುಕೆ ಯಲ್ಲಿ, ಡೆಲ್ಟಾ ರೂಪಾಂತರಿತ ಕೋವಿಡ್ -19 ಹೊಸ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ಎಂದು ವರದಿಯಾಗಿದೆ.

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ಸೋಂಕು ಆಲ್ಫಾ ರೂಪಾಂತರಿ ಸೋಂಕಿಗಿಂತ ಶೇಕಡಾ 50 ರಷ್ಟು ವೇಗವಾಗಿ ಹರಡುತ್ತದೆ ಎಂದು ಭಾರತ ಸರ್ಕಾರದ ಕೋವಿಡ್ ವಿಶೇಷ ಸಮಿತಿಯ ಅಧ್ಯಯನ ವರದಿ ತಿಳಿಸಿದ್ದು, ಭಾರತದಲ್ಲಿ ಕೋವಿಡ್ ಸೋಂಕು ಹಠಾತ್ ಏರಿಕೆಯಾಗುವುದಕ್ಕೆ ಇದೇ ಕಾರಣ ಇರಬಹುದು ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ ಎಂಬುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್ ಡಿ ಟಿವಿ ವರದಿ ಮಾಡಿದೆ.

ಡೆಲ್ಟಾ ರೂಪಾಂತರಿ ಸೋಂಕಿನಿಂದ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ :

ದೇಶದಲ್ಲಿ ಡೆಲ್ಟಾ ರೂಪಾಂತರಿ ಸೋಂಕಿಗೆ ಒಳಗಾದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಆಸ್ಪತ್ರೆಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ ಹೆಚ್ಚಾಗಿ ದಾಖಲಾಗುತ್ತಿವೆ. ಇದುವರೆಗೆ ಕಾಣಿಸಿಕೊಂಡ ಯಾವುದೇ ಸಾಂಕ್ರಾಮಿಕ ಸೋಂಕಿನ ಕಾರಣದಿಂದ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎಂದು ವೈದ್ಯಕೀಯ ಅಧ್ಯಯನ ವರದಿ ತಿಳಿಸಿದೆ.

ಇದನ್ನೂ ಓದಿ : ಸಿಡಿ ಪ್ರಕರಣ : ನರೇಶ್​ ಗೌಡ -ಶ್ರವಣ್ ಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು!

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.