ಡೆಲ್ಟಾ ತಂದ ಸಂಕಷ್ಟ
Team Udayavani, Aug 4, 2021, 7:30 AM IST
ಹೊಸದಿಲ್ಲಿ: ದೇಶದ ಸೀಮಿತ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ರೂಪಾಂತರಿಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
12 ರಾಜ್ಯಗಳ 44 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿದೆ. ಕಳೆದ 4 ವಾರಗಳಲ್ಲಿ ದೇಶದ 18 ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದ್ದು, ಹೊಸ ಪ್ರಕರಣಗಳ ಪೈಕಿ ಶೇ.47.5ರಷ್ಟು ಕೇಸುಗಳು ಈ ಜಿಲ್ಲೆಗಳಿಗೆ ಸೀಮಿತವಾಗಿವೆ. ಇವುಗಳಲ್ಲಿ 10 ಜಿಲ್ಲೆಗಳು ಕೇರಳದ್ದಾಗಿದ್ದರೆ, ಮಹಾರಾಷ್ಟ್ರದ 3 ಮತ್ತು ಉಳಿದವು ಈಶಾನ್ಯ ರಾಜ್ಯಗಳ ಜಿಲ್ಲೆಗಳು ಎಂದೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಸೋಮವಾರದಿಂದ ಮಂಗಳವಾರಕ್ಕೆ 30,549 ಮಂದಿಗೆ ಸೋಂಕು ದೃಢಪಟ್ಟಿದ್ದು, 422 ಮಂದಿ ಸಾವಿಗೀಡಾಗಿದ್ದಾರೆ. 6 ದಿನಗಳ ಬಳಿಕ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.
ಈ ನಡುವೆ, ಡಿಸೆಂಬರ್ ವೇಳೆಗೆ ಕೊವಿಶೀಲ್ಡ್ ಲಸಿಕೆ ಉತ್ಪಾದನೆಯ ಸಾಮರ್ಥ್ಯವನ್ನು ಮಾಸಿಕ 12 ಕೋಟಿ ಡೋಸ್ ಹಾಗೂ ಕೊವ್ಯಾಕ್ಸಿನ್ ಉತ್ಪಾದನ ಸಾಮರ್ಥ್ಯವನ್ನು 5.80 ಕೋಟಿ ಡೋಸ್ಗೆ ಏರಿಸಲಾಗುತ್ತದೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಇನ್ನೂ 4 ಕಂಪೆನಿಗಳಲ್ಲಿ ಲಸಿಕೆ ಉತ್ಪಾದನೆ :
ಅಕ್ಟೋಬರ್-ನವೆಂಬರ್ ವೇಳೆಗೆ ಇನ್ನೂ 4 ಫಾರ್ಮಾ ಕಂಪೆನಿಗಳು ಲಸಿಕೆ ಉತ್ಪಾದನೆ ಆರಂಭಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾಹಿತಿ ನೀಡಿದ್ದಾರೆ. ಈಗಾಗಲೇ ದೇಶದಲ್ಲಿ 47 ಕೋಟಿ ಡೋಸ್ ಲಸಿಕೆ ವಿತರಣೆ ಮುಗಿದಿದೆ. ಮುಂದಿನ ದಿನಗಳಲ್ಲಿ ಬಯಾಲಾಜಿಕಲ್ ಇ , ನೋವರ್ಟಿಸ್ ಲಸಿಕೆ ಯೂ ದೇಶದಲ್ಲಿ ಲಭ್ಯವಾಗಲಿವೆ. ಝೈಡಸ್ ಕ್ಯಾಡಿಲ್ಲಾಗೂ ತುರ್ತು ಬಳಕೆಗೆ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.
ವುಹಾನ್ನಲ್ಲಿ ಅಬ್ಬರ :
ಕೊರೊನಾ ಜನ್ಮಸ್ಥಾನ ಚೀನದ ವುಹಾನ್ನಲ್ಲಿ ಮತ್ತೆ ಸೋಂಕು ಅಬ್ಬರಿ ಸಲಾರಂಭಿಸಿದೆ. ದಿನೇ ದಿನೆ ಪ್ರಕರಣ ಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಮೂಹಿಕ ಪರೀಕ್ಷೆಗೆ ಚೀನ ಸರಕಾರ ಮುಂದಾಗಿದೆ. ವುಹಾನ್ನ ಎಲ್ಲ 1.10 ಕೋಟಿ ಮಂದಿ ಯನ್ನೂ ಪರೀಕ್ಷೆಗೆ ಒಳಪಡಿಸಲು ನಿರ್ಧ ರಿಸಲಾಗಿದೆ. ಇದೇ ವೇಳೆ, ಜರ್ಮನಿಯಲ್ಲಿ 12 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿ ಗೂ ಲಸಿಕೆ ವಿತರಣೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ