Demonetisation ಅಮೆರಿಕದ ಪಿತೂರಿ:ಮಾಜಿ ಸಿಎಂ ಚವಾಣ್‌


Team Udayavani, Sep 27, 2017, 12:40 PM IST

655889.jpg

 ನಾಗಪುರ: ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಪಮೌಲ್ಯ ನಿರ್ಣಯವನ್ನು ಭಾರತದ ಆರ್ಥಿಕತೆ  ನಾಶಮಾಡಲು ಅಮೆರಿಕ ನಡೆಸಿದ ಪಿತೂರಿ ಎಂದು ಕರೆದಿದ್ದಾರೆ.

ಅಮೆರಿಕದ ಅರ್ಥವ್ಯವಸ್ಥೆಯನ್ನು ಸುಧಾರಿಸಲು ಹಾಗೂ ಭಾರತದ ಆರ್ಥಿಕತೆಯನ್ನು ನಾಶ ಮಾಡಲು ಅಮೆರಿಕದ ಮಾಜಿ ರಾಷ್ಟ್ರಪತಿ ಬರಾಕ್‌ ಒಬಾಮಾ ನಡೆಸಿದ ಪಿತೂರಿಗೆ ಸಿಕ್ಕಿಕೊಂಡು ಮೋದಿ ಅವರು ದೇಶದ ಜನರ ಮೇಲೆ ನೋಟುರದ್ದತಿಯ ಪರೀಕ್ಷೆಯನ್ನು ನಡೆಸಿದ್ದು, ಅದರಿಂದಾಗಿ ಭಾರತದ ಆರ್ಥಿಕತೆಯು ಈಗ ಅವಸಾನದ ಅಂಚಿನತ್ತ ಸಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರವಿವಾರ ಇಲ್ಲಿ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತ ನಾಡಿದ ಕಾಂಗ್ರೆಸ್‌ ನಾಯಕ ಚವಾಣ್‌ ಅವರು,  ಪ್ರಧಾನಿ ಮೋದಿ ಅವರಿಗೆ ಅರ್ಥವ್ಯವಸ್ಥೆಯ ಬಗ್ಗೆ ಹೆಚ್ಚಿಗೆ ‰ಜ್ಞಾನ ಇಲ್ಲ. ಇಂಥದರಲ್ಲಿ ಭ್ರಷ್ಟಾಚಾರ ಮುಕ್ತ ಭಾರತದ ಅವರ ಧ್ಯೇಯದ ಅಡಿಯಲ್ಲಿ ಕೆಲವು ಅಧಿಕಾರಿಗಳು ಅವರಿಗೆ ನೋಟು ರದ್ಧತಿಯ ಬಗ್ಗೆ ಸಲಹೆಯನ್ನು ನೀಡಿದ್ದರು.ಆದರೆ, ಪ್ರಧಾನಿ ಅವರು ಅದರ ಬಗ್ಗೆ ಯಾವುದೇ ಯೋಚನೆ ಅಥವಾ ಅರ್ಥವನ್ನು ಮಾಡಿಕೊಳ್ಳದೆ ನೇರವಾಗಿ ನಿರ್ಣಯವನ್ನು ತೆಗೆದುಕೊಂಡರು. ಇದೀಗ ದೇಶದ ಜನರು ಅದರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ ಎಂದರು. 

ವಿಶ್ವದ್ಯಂತ ರಾಷ್ಟ್ರಗಳ ಪ್ರಮುಖರು ತಮ್ಮ ದೇಶದ  ಕೈಗಾರಿಕೋದ್ಯ ಮಿಗಳಿಗೆ ಲಾಭ ನೀಡಲು ಬಂದು-ಹೋಗುತ್ತಿರುತ್ತಾರೆ. ಅದೇ, ಪ್ರಧಾನಿ ಮೋದಿ ಅವರು ಚೆಕ್‌ಬುಕ್‌ ಹಿಡಿದುಕೊಂಡು ಕೇವಲ ಖರೀದಿ ದಾರನಂತೆ ವಿದೇಶಗಳ ಪ್ರವಾಸ ಮಾಡುತ್ತಾರೆ. ಈ ಕಾರಣದಿಂದಾಗಿ ಅವರಿಗೆ ಎಲ್ಲ ಕಡೆಗಳಲ್ಲೂ ರನ್ನ ಗಂಬಳಿಯ ಸ್ವಾಗತ ಸಿಗುತ್ತದೆ. ಆದರೆ, ದೇಶಕ್ಕೆ ಏನೂ ಸಿಗುವುದಿಲ್ಲ ಎಂದು ಚವಾಣ್‌ ಕಿಡಿಕಾರಿದ್ದಾರೆ.

ಬುಲೆಟ್‌ ರೈಲು ವಿರೋಧಿಸಿದ್ದಕ್ಕೆ ಪ್ರಭುವಿನ ಎತ್ತಂಗಡಿ !
ಮಾಜಿ ರೈಲ್ವೇ ಸಚಿವ ಸುರೇಶ್‌ ಪ್ರಭು ಅವರು ಬುಲೆಟ್‌ ರೈಲು ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ರೈಲ್ವೇ ಸಚಿವ ಖಾತೆಯಿಂದ ಎತ್ತಂಗಡಿ ಮಾಡಲಾಗಿದೆ. ಅದೇ, ನಿತಿನ್‌ ಗಡ್ಕರಿ ಅವರ ವರ್ಚಸ್ಸನ್ನು  ಕಡಿಮೆ ಮಾಡುವ ಉದ್ದೇಶದಿಂದ ಅವರಿಗೆ ಗಂಗಾ ಶುದ್ಧೀಕರಣದಂತಹ ಸಚಿವಾಲಯದ ಜವಾಬ್ದಾರಿ ವಹಿಸಲಾಗಿದೆ. ಬುಲೆಟ್‌ ರೈಲು ಯೋಜನೆಯಿಂದ ದೇಶಕ್ಕೆ ಏನೂ ಲಾಭ ಇಲ್ಲ. ಇದರಿಂದ ಕೇವಲ ಜಪಾನ್‌ಗೆ ಲಾಭವಾಗಲಿದೆ ಎಂದೂ ಅವರು ಆರೋಪಿಸಿದ್ದಾರೆ.

ರಾಜ್ಯದ ಭ್ರಷ್ಟ ಸಚಿವರ ವಿರುದ್ಧ  ನ್ಯಾಯಾಂಗ ತನಿಖೆಗೆ ಆಗ್ರಹ ಇದೇ ಸಂದರ್ಭದಲ್ಲಿ ದೇವೇಂದ್ರ ಫಡ್ನವೀಸ್‌ ಸರಕಾರದ‌ ಭ್ರಷ್ಟ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದ  ಚವಾಣ್‌, ಪ್ರಕಾಶ್‌ ಮೆಹ್ತಾ, ಸುಭಾಷ್‌ ದೇಸಾಯಿ ಅವರಿಂದ ಹಿಡಿದು ವಿಶ್ವಾಸ್‌ ಪಾಟೀಲ್‌ ವರೆಗಿನ ಭ್ರಷ್ಟಾಚಾರ ಆರೋಪ ಹಾಗೂ ರಾಧೆಶ್ಯಾಮ್‌ ಮೋಪಲ್ವಾರ್‌ ಅವರ ವಿರುದ್ಧದ ಅವ್ಯವಹಾರದಂತಹ ಗಂಭೀರ ಪ್ರಕರಣಗಳು ಬಯಲಾ ಗಿರುವ ಹೊರತಾಗಿಯೂ ಸಿಎಂ  ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತಿದ್ದಾರೆ ಎಂದು ದೂರಿದ್ದಾರೆ. ಚರ್ಚೆಯಲ್ಲಿ ಮಾಜಿ ರಾಜ್ಯಸಚಿವ ರಾಜೇಂದ್ರ ಮುಲಕ್‌ ಅವರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.