ಚಿಟ್ಫಂಡ್ ಸ್ಕ್ಯಾಮ್;ಸಿಬಿಐ ತಂಡವನ್ನೇ ಬಂಧಿಸಿದ ಕೋಲ್ಕತಾ ಪೊಲೀಸರು
Team Udayavani, Feb 3, 2019, 1:49 PM IST
ಕೋಲ್ಕತಾ: ಚಿಟ್ ಫಂಡ್ ಹಗರಣದ ತನಿಖೆಯ ಅಂಗವಾಗಿ ಸಿಬಿಐ ಅಧಿಕಾರಿಗಳು ಭಾನುವಾರ ಸಂಜೆ ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಐವರು ಸಿಬಿಐ ಅಧಿಕಾರಿಗಳನ್ನು ಪೊಲೀಸರು ಗೇಟ್ ಬಳಿ ತಡೆದು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲಂಡನ್ ಸ್ಟ್ರೀಟ್ನಲ್ಲಿರುವ ಕುಮಾರ್ ಅವರ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಕೋಲ್ಕತಾ ಮೇಯರ್ ಉಪಸ್ಥಿತರಿದ್ದರು.
ರೋಸ್ ವ್ಯಾಲಿ ಹಗರಣ ಮತ್ತು ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುತ್ತಿದ್ದು , ರಾಜೀವ್ ಕುಮಾರ್ ಅವರನ್ನು ಬಂಧಿಸಲು ಆಗಮಿಸಿದ್ದರು ಎನ್ನಲಾಗಿದೆ.
ಐಪಿಎಸ್ ಅಧಿಕಾರಿಯಾಗಿದ್ದ ರಾಜೀವ್ ಕುಮಾರ್ ಅವರು ಪಶ್ಚಿಮ ಬಂಗಾಳ ಸರಕಾರ ರಚಿಸಿದ್ದ ಎಸ್ಐಟಿಯಲ್ಲಿ ತನಿಖಾಧಿಯಾಗಿದ್ದರು. ಹಗರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿರುವ ಕಡತಗಳು ಮತ್ತು ಮಹತ್ವದ ದಾಖಲೆಗಳಿಗೆ ಸಂಬಂಧಿಸಿ ಅವರನ್ನು ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ