ಉತ್ತರ ಭಾರತದಲ್ಲಿ ದಟ್ಟ ಮಂಜು, ರೈಲು, ವಿಮಾನ ಸೇವೆ ಬಾಧಿತ
Team Udayavani, Jan 1, 2018, 11:22 AM IST
ಹೊಸದಿಲ್ಲಿ : 2018ರ ಹೊಸ ವರ್ಷದ ಇಂದು ಸೋಮವಾರದ ಮೊದಲ ದಿನ ರಾಷ್ಟ್ರ ರಾಜಧಾನಿ ದಿಲ್ಲಿ ಮತ್ತು ಉತ್ತರ ಪ್ರದೇಶ ಸಹಿತ ಉತ್ತರ ಭಾರತದ ಹಲವು ಭಾಗಗಳ ಜನರನ್ನು ದಟ್ಟನೆಯ ಮಂಜು ಮತ್ತು ಮೈ ಕೊರೆಯುವ ಚಳಿ ಸ್ವಾಗತಿಸಿತು.
ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು 50 ಮೀ. ಗೂ ಕಡಿಮೆ ದೂರದ ಗೋಚರತೆ ಅತ್ಯಂತ ಕ್ಷೀಣ ವಾಗಿದ್ದುದರಿಂದ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸಲಾಯಿತು. ದಿಲ್ಲಿ ಆಗಮಿಸುವ ಮತ್ತು ನಿರ್ಗಮಿಸುವ ಸುಮಾರು 350 ವಿಮಾನಗಳ ಹಾರಾಟವನ್ನು ಪ್ರತಿಕೂಲ ವಾತಾವರಣದ ಪ್ರಯುಕ್ತ ಅಮಾನತುಗೊಳಿಸಲಾಯಿತು.
ಇದೇ ರೀತಿ ನಿಕೃಷ್ಟ ಗೋಚರತೆಯ ಕಾರಣ ರೈಲು ಸೇವೆ ಕೂಡ ತೀವ್ರವಾಗಿ ಬಾಧಿತವಾಯಿತು. 56 ರೈಲುಗಳು ವಿಳಂಬಿತವಾಗಿ ಓಡುತ್ತಿದ್ದು 20 ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಯಿತು; 15 ರೈಲುಗಳನ್ನು ರದ್ದುಗೊಳಿಸಲಾಯಿತು.
ದಿಲ್ಲಿಯಲ್ಲಿಂದು ದಿನದ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ಗೆ ಇಳಿಯಿತು. ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಯಿತು. ಅಂತೆಯೇ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಿನದ ಮಟ್ಟಿಗೆ 23 ಡಿಗ್ರಿ ಸೆಲ್ಸಿಯಸ್ ಮತ್ತು 5 ಡಿಗ್ರಿ ಸೆ. ಆಜೂಬಾಜೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ