Shocking: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ
Team Udayavani, Dec 6, 2023, 2:00 PM IST
ಲಕ್ನೋ: ರೈಲ್ವೇಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.
ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.
ಘಟನೆ ವಿವರ: ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.
ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ: Rajasthan: ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್ಕೌಂಟರ್ ಮಾಡಿ… ಕಾಂಗ್ರೆಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು