ಅಡಕತ್ತರಿಯಲ್ಲಿ ಫ‌ಡ್ನವಿಸ್‌ ಸಂಪುಟ ವಿಸ್ತರಣೆ:ಹಲವರಿಗೆ ಕೊಕ್‌?


Team Udayavani, Oct 19, 2017, 12:04 PM IST

Devendra-Fadnavis.jpg

ಮುಂಬಯಿ: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಮುಹೂರ್ತ ಒದಗಿಬಂದಿದ್ದು, ದೀಪಾವಳಿಯ ಅನಂತರ ವಿಸ್ತರಣೆ ಮತ್ತು ಪುನಾರಚನೆ ನಡೆಯಲಿದೆ ಎಂದು ಸ್ವತಃ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ದೃಢಪಡಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ತೊರೆದು ಮಹಾರಾಷ್ಟ್ರ ಸ್ವಾಭಿಮಾನ್‌ ಪಕ್ಷವನ್ನು ಸ್ಥಾಪಿಸಿರುವ ಹಿರಿಯ ರಾಜಕೀಯ ನೇತಾರ ನಾರಾಯಣ್‌ ರಾಣೆ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಸುಳಿವನ್ನು ನೀಡಿದ ಫ‌ಡ್ನವೀಸ್‌,  ಮಾಜಿ ಮುಖ್ಯಮಂತ್ರಿ ನಾರಾಯಣ್‌ ರಾಣೆ ಅವರು ಈಗ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಭಾಗವಾಗಿದ್ದು, ಅವರ ಬಗ್ಗೆ ಯೋಗ್ಯ ನಿರ್ಣಯವೊಂದನ್ನು ತೆಗೆದು ಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ರಾಣೆ ಅವರು ತಮ್ಮ ಹಿರಿತನ ಮತ್ತು ಅನುಭವ ವನ್ನು ಪರಿಗಣಿಸಿ ಯೋಗ್ಯ ಖಾತೆಯನ್ನು ನೀಡಬೇಕೆಂಬ ಬೇಡಿಕೆಯಿಟ್ಟಿ ದ್ದಾರೆ. ರಾಜಕೀಯ ವಲಯದ ಮೂಲಗಳು ಹೇಳುವ ಪ್ರಕಾರ ಕಂದಾಯ, ಲೋಕೋಪ ಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳ ಮೇಲೆ ರಾಣೆ ಕಣ್ಣು ಹಾಕಿದ್ದಾರೆ. 

ತಮ್ಮ ಅಧಿಕೃತ ನಿವಾಸ ವರ್ಷಾ ಬಂಗಲೆ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫ‌ಡ್ನವೀಸ್‌, ಸಂಪುಟ ಪುನಾರಚನೆ ಶೀಘ್ರದಲ್ಲೇ ನಡೆಯಲಿದ್ದು, ದೀಪಾವಳಿ ಮುಗಿದ ಬಳಿಕ ತತ್‌ಕ್ಷಣ ನಡೆಯುವ ಸಾಧ್ಯತೆಯಿದೆ ಎಂದು ನುಡಿದಿದ್ದಾರೆ. ಸಂಪುಟದಲ್ಲಿ ಕಳ‌ಪೆ ನಿರ್ವಹಣೆ ನೀಡಿರುವ ಸಚಿವರನ್ನು ಕೈಬಿಡುವ ಸುಳಿವು ನೀಡಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿ ಫಡ್ನವೀಸ್‌ ಅವರು ಶನಿವಾರ ರಾತ್ರಿ ಅಹ್ಮದಾಬಾದ್‌ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರ ನಡುವೆ ಸುಮಾರು 6 ತಾಸುಗಳ ಮಾತುಕತೆ ನಡೆದಿದೆ ಎಂದು ಪಕ್ಷ ಮೂಲಗಳು ತಿಳಿಸಿವೆ.ಮುಖ್ಯವಾಗಿ ಸಂಪುಟ ಪುನಾರಚನೆ ಮತ್ತು ರಾಣೆಯ ಸೇರ್ಪಡೆಯ ಕುರಿತು ಶಾ ಜತೆಗೆ ಫ‌ಡ್ನವಿಸ್‌ ಚರ್ಚಿಸಿದ್ದಾರೆ. 

ರಾಣೆ ಕಾಂಗ್ರೆಸ್‌ ತೊರೆದ ಬಳಿಕ ಮಹಾರಾಷ್ಟ್ರ ಸ್ವಾಭಿಮಾನ ಪಕ್ಷವನ್ನು ಸ್ಥಾಪಿಸಿ, ಇತ್ತೀಚೆಗೆ ಎನ್‌ಡಿಎಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ರಾಣೆ ಅವರು ರಾಜ್ಯದ ಹಿರಿಯ ರಾಜಕೀಯ ನೇತಾರರಲ್ಲಿ ಓರ್ವರಾಗಿರುವ ಕಾರಣ ಅವರಿಗೆ ಪ್ರಮುಖ ಖಾತೆಯನ್ನು ನೀಡಬೇಕೆಂಬುದು ಅವರ ಬೆಂಬಲಿಗರ ಆಶಯವಾಗಿದೆ. ಅದೇ, ಬಿಜೆಪಿಯ ಇತರ ಸಚಿವರು ತಮ್ಮ ಖಾತೆಯನ್ನು ರಾಣೆಗೆ ಬಿಟ್ಟುಕೊಡುವ ಸಂಬಂಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಣೆ ಕಣ್ಣಿಟ್ಟಿರುವ ಕಂದಾಯ ಮತ್ತು ಲೋಕೋಪಯೋಗಿ ಪ್ರಸ್ತುತ ಬಿಜೆಪಿಯ ಪ್ರಮುಖ ನಾಯಕರ ಕೈಯಲ್ಲಿದೆ. ಈ ಖಾತೆಗಳಭು° ಅವರಂದ ಕಿತ್ತುಕೊಂಡರೆ ಪಕ್ಷದಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆಯಿರುವುದರಿಂದ ಈ ಸಲದ ಪುನಾರಚನೆ ಫ‌ಡ್ನವಿಸ್‌ ಪಾಲಿಗೆ ಷಗ್ನಿಪರೀಕ್ಷೆಯಾಗಿದೆ. ಇತ್ತ ರಾಣೆಯೂ ಕಡಿಮೆ ಮಹತ್ವದ ಖಾತೆಯನ್ನು ಒಪ್ಪಿಕೊಳ್ಳಲು ತಯಾರಿಲ್ಲ, ಅತ್ತ ಬಿಜೆಪಿ ನಾಯಕರು ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಇವರ ಮಧ್ಯೆ ಫ‌ಡ್ನವಿಸ್‌ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. 

ಚಂದ್ರಕಾಂತ್‌ ಪಾಟೀಲ್‌ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ನಿಕಟ ಸಂಬಂಧ ಹೊಂದಿ ರುವ ಕಾರಣ ಅವರ ಖಾತೆ ಬದಲಾವಣೆ ಯಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ಆದರೆ ರಾಣೆಗೆ ತೃಪ್ತಿದಾಯಕ ಖಾತೆ ಸಿಗದಿದ್ದರೆ, ಅವರು ಸಮಸ್ಯೆಗಳನ್ನು ಸೃಷ್ಟಿಸುವ ಸಾಧ್ಯತೆಯೂ ಇದೆ.

ಹಲವರ ಖಾತೆಗೆ ಕತ್ತರಿ
ರಾಜ್ಯ ಸಚಿವ ಸಂಪುಟದಲ್ಲಿ ಕೆಲವು ಸಚಿವರುಗಳ ನಿರ್ವಹಣೆಯಿಂದ ಮುಖ್ಯಮಂತ್ರಿ ಫಡ್ನವೀಸ್‌ ಅವರು ಅತೃಪ್ತರಾಗಿದ್ದು, ಅವರ ಸ್ಥಳದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಈ ಸಂಭಾವ್ಯ ಸಂಪುಟ ವಿಸ್ತರಣೆಯಲ್ಲಿ 2019ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಳ್ಳಲಾಗುವುದು. ಪಶ್ಚಿಮ ಮಹಾರಾಷ್ಟ್ರದಲ್ಲಿ ರಾಜು ಶೆಟ್ಟಿ ಅವರ ಶೇತ್ಕರಿ ಸಂಘಟನೆಯು ಎನ್‌ಡಿಎಯಿಂದ ಬೇರ್ಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿ ಪಕ್ಷವನ್ನು ಬಲಪಡಿಸಲು ಹೊಸ ಮುಖಕ್ಕೆ ಅವಕಾಶ ಸಿಗುವ ಸಾಧ್ಯತೆಯಿದೆ. ಅದೇ ರೀತಿ, ವಿದರ್ಭದಲ್ಲಿ ಕೆಲವು ಸಚಿವರುಗಳ ಖಾತೆಗೆ ಕತ್ತರಿ ಬೀಳುವ ಸಾಧ್ಯತೆಯಿದೆ. ಅಲ್ಲದೆ, ಸಂಪುಟದಲ್ಲಿ ಸಹಭಾಗಿಯಾಗಲು ಕೆಲವು ಹೊಸ ಶಾಸಕರೂ ಹಾತೊರೆದು ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.