ರ್ಯಾಲಿ ಆಯೋಜಕರ ತನಿಖೆಯಾಗಲಿ: ಫಡ್ನವೀಸ್
Team Udayavani, Nov 22, 2021, 12:08 PM IST
ಮುಂಬಯಿ: ಅಮರಾವತಿ, ನಾಂದೇಡ್ ಮತ್ತು ಮಾಲೆಗಾಂವ್ನಲ್ಲಿ ರ್ಯಾಲಿಗಳನ್ನು ಯಾರು ಆಯೋಜಿಸಿದ್ದಾರೆ ಎಂಬುವುದನ್ನು ತನಿಖೆ ನಡೆಸಬೇಕು. ಅದರ ಹಿಂದೆ ಅವರ ಪಾತ್ರವೇನು, ಗಲಭೆ ಎಬ್ಬಿಸಲು ರ್ಯಾಲಿ ಆಯೋಜಿಸಲಾಗಿದೆಯೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಆಗ್ರಹಿಸಿದ್ದಾರೆ.
ತ್ರಿಪುರಾ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಅಮರಾವತಿ, ನಾಂದೇಡ್ ಮತ್ತು ಮಾಲೆಗಾಂವ್ನಲ್ಲಿ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆ ರವಿವಾರ ಅಮರಾವತಿಗೆ ಭೇಟಿ ನೀಡಿದ ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರ ಅಲ್ಲಿನ ಜನರ ಅಭಿಪ್ರಾಯಗಳನ್ನು ಆಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಜಿಲ್ಲೆಯ ಉಸ್ತುವಾರಿ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ನ. 13ರ ಘಟನೆಯನ್ನು ಮಾತ್ರ ಎತ್ತಿ ಹಿಡಿಯಲಾಗುತ್ತಿದೆ. ಅದೇ ನ. 12ರ ಘಟನೆ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ನ. 12ರಂದು ಮುಸ್ಲಿಂ ಸಮುದಾಯದ ಜನರು 111 ಸ್ಥಳಗಳಲ್ಲಿ ಜಮಾಯಿಸಿದ್ದರು. ಆದರೆ ಈ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದುಕೊಂಡವು. ಸುಳ್ಳು ಮಾಹಿತಿಯ ಆಧಾರದ ಮೇಲೆ ರಾಜ್ಯಾದ್ಯಂತ ಉದ್ದೇಶಪೂರ್ವಕವಾಗಿ ನ. 12ರಂದು ರ್ಯಾಲಿಯ ಪಿತೂರಿ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ.
ನ. 12ರಂದು ಅಮರಾವತಿಯಲ್ಲಿ ರ್ಯಾಲಿ ಪ್ರಾರಂಭವಾಯಿತು. ಈ ಮೆರವಣಿಗೆಗೆ ಕಾರಣವೇನು ಎಂಬುದರ ಬಗ್ಗೆಯೂ ತನಿಖೆಯಾಗಬೇಕು. ಪ್ರತಿಭಟನೆಯ ಬಳಿಕ ಗಲಭೆಕೋರರು ಅಂಗಡಿಗಳು ಮತ್ತು ಜನರನ್ನು ಗುರಿಯಾಗಿಸಿದ್ದರು. ಈ ಗಲಭೆಯ ಪರಿಣಾಮವಾಗಿ ನಿರ್ದಿಷ್ಟ ಸಮುದಾಯ ಮತ್ತು ಧರ್ಮಕ್ಕೆ ಸೇರಿದ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ಇದರಿಂದ ಅಮರಾವತಿಯಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಫಡ್ನವೀಸ್ ಆರೋಪಿಸಿದ್ದಾರೆ.
ನ. 13ರಂದು ಅಮರಾವತಿಯಲ್ಲಿ ನಡೆದ ಘಟನೆ ನ. 12ರ ಘಟನೆಗೆ ಪ್ರತಿಕ್ರಿಯೆ. ನ. 13ರಂದು ನಡೆದ ಹಿಂಸಾಚಾರವನ್ನು ನಾನು ಬೆಂಬಲಿಸುವುದಿಲ್ಲ. ಆದರೆ ಈಗ ಸರಕಾರ, ಅಧಿಕಾರಿಗಳು, ಅಮರಾವತಿಯ ಜಿಲ್ಲಾ ಉಸ್ತುವಾರಿ ಸಚಿವೆ ಯಶೋಮತಿ ಠಾಕೂರ್ ಸೇರಿ ನ. 13ರ ಘಟನೆಯನ್ನು ಮಾತ್ರ ಎತ್ತಿ ಹಿಡಿಯುತ್ತಿರುವುದು ತಪ್ಪು. ನಮ್ಮನ್ನು ತಪ್ಪಾಗಿ ಎಳೆದಾಡಿದರೆ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್